ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಕುರಿತು ಕೇರಳ ಸಚಿವ ಪಿ. ರಾಜೀವ್ ಪ್ರತಿಕ್ರಿಯಿಸಿದ್ದಾರೆ. ಫಲಿತಾಂಶದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇರಳ ರಾಜ್ಯದಲ್ಲಿ ಎಲ್ಡಿಎಫ್ಗೆ (LDF) ಇದು ಅನಿರೀಕ್ಷಿತ ಹಿನ್ನಡೆಯಾಗಿದೆ ಎಂದು ತಿಳಿಸಿದ್ದಾರೆ.
ಕಳೆದ 10 ವರ್ಷಗಳಿಂದ ಕೇರಳದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಾವು ಅತ್ಯುತ್ತಮ ಪ್ರಯತ್ನ ಮಾಡಿದ್ದೇವೆ. ಆದರೆ ಜನರ ತೀರ್ಪು ಮಾತ್ರ ನಮಗೆ ಸಂಪೂರ್ಣವಾಗಿ ವಿರುದ್ಧವಾಗಿ ಬಂದಿದೆ ಎಂದು ಅವರು ಹೇಳಿದ್ದಾರೆ. ಈ ತೀರ್ಪಿನಿಂದ ನಾವು ಪಾಠ ಕಲಿಯಬೇಕಿದೆ, ಫಲಿತಾಂಶಗಳನ್ನು ವಿಶ್ಲೇಷಿಸಬೇಕಿದೆ ಹಾಗೂ ಕೇರಳದ ಜನರ ಬೆಂಬಲವನ್ನು ಮತ್ತೆ ಪಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಬಾರಿ ಎಲ್ಡಿಎಫ್ ರಚನಾತ್ಮಕ ಪ್ರತಿಪಕ್ಷವಾಗಿ ಕೆಲಸ ಮಾಡಬೇಕಿದೆ ಮತ್ತು ಅದೇ ಈಗ ನಮ್ಮ ಮುಂದಿರುವ ಜವಾಬ್ದಾರಿಯಾಗಿದೆ ಎಂದು ಪಿ. ರಾಜೀವ್ ತಿಳಿಸಿದ್ದಾರೆ.
