ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು “ಕೋಟಿ ಕಂಠ ಗಾಯನ” ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು, ಸಾಮೂಹಿಕವಾಗಿ ವಿಶ್ವಾದ್ಯಂತ ಕನ್ನಡದ ಹಾಡುಗಳನ್ನು ಏಕಕಾಲದಲ್ಲಿ ಹಾಡುವ “ಕೋಟಿ ಕಂಠ ಗಾಯನ” ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 28ರಂದು ಆಯೋಜಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಎಲ್ಲರಿಗು ಭಾಗವಹಿಸುವಂತೆ ಮನವಿ ಮಾಡಿರುವ ಅವರು, ಕನ್ನಡದ ಗೀತೆಗಳನ್ನು ಒಟ್ಟಾಗಿ ಹಾಡುವ ಮೂಲಕ ಕನ್ನಡದ ಸೊಬಗನ್ನು ವಿಶ್ವಕ್ಕೆ ಪರಿಚಯಿಸೋಣ ಎಂದಿದ್ದಾರೆ.