Tuesday, April 1, 2025

ಸತ್ಯ | ನ್ಯಾಯ |ಧರ್ಮ

ಪೊಲೀಸ್ ವಿಚಾರಣೆಗೆ ಕುನಾಲ್ ಕಾಮ್ರಾ ಗೈರು

ಮುಂಬೈ: ಮನರಂಜನಾ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ‘ದ್ರೋಹಿ’ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಾಮ್ರಾ ಮತ್ತೊಮ್ಮೆ ಪೊಲೀಸರ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ.

ಸೋಮವಾರ ಸಮನ್ಸ್ ಜಾರಿಯಾದರೂ ಅವರು ಮುಂಬೈನ ಖಾರ್ ಪೊಲೀಸ್ ಠಾಣೆಗೆ ಹಾಜರಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಗೆ ಇದು ಎರಡನೇ ಬಾರಿ ನಾವು ಸಮನ್ಸ್‌ ನೀಡುತ್ತಿರುವುದು. ಅವರು ಮನೆಯಲ್ಲಿದ್ದಾರೋ ಇಲ್ಲವೋ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಮುಂಬಯಿಯಲ್ಲಿರುವ ಅವರ ಮನೆಗೆ ಹೋಗಿದ್ದೆವು ಎಂದು ಹೇಳಿದ್ದಾರೆ.

ಕುನಾಲ್ ಅಲ್ಲಿ ಇಲ್ಲದ ಕಾರಣ, ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಏತನ್ಮಧ್ಯೆ, ಕುನಾಲ್ ತನ್ನನ್ನು ಹುಡುಕಲು ಬಂದ ಪೊಲೀಸರ ಬಗ್ಗೆ ‘X’ ವೇದಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. “ನಾನು ಕಳೆದ ಹತ್ತು ವರ್ಷಗಳಿಂದ ಆ ಮನೆಯಲ್ಲಿ ವಾಸಿಸುತ್ತಿಲ್ಲ. ಆ ವಿಳಾಸಕ್ಕೆ ಹೋಗುವುದು ಸಮಯ ಮತ್ತು ಸಾರ್ವಜನಿಕ ಸಂಪನ್ಮೂಲಗಳ ವ್ಯರ್ಥ” ಎಂದು ಕುನಾಲ್ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page