Sunday, June 8, 2025

ಸತ್ಯ | ನ್ಯಾಯ |ಧರ್ಮ

ಲತಾ ಮಂಗೇಶ್ಕರ್ ನೆನಪು: ಅಭಿಮಾನಿಗಳ ಶ್ರದ್ಧಾಂಜಲಿ

ಭಾರತ ರತ್ನ ಲತಾ ಮಂಗೇಶ್ಕರ್ ಅವರ ಜನ್ಮದಿನದ ಪ್ರಯುಕ್ತ ಅವರ ಅಪಾರ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಂದಹಾಗೆ ಲತಾ ಮಂಗೇಶ್ಕರ್ ಅವರು 28 ಸೆಪ್ಟೆಂಬರ್ 1929 ರಲ್ಲಿ ಲತಾ ಮಧ್ಯಪ್ರದೇಶದ ಇಂದೋರಿನಲ್ಲಿ ಜನಿಸುತ್ತಾರೆ.

 ಲತಾ ಮಂಗೇಶ್ಕರ್‌ ಅವರು ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತೀಯ ಭಾಷೆಗಳಲ್ಲಿಯೂ ಹಾಡಿದ್ದಾರೆ. ಇವರ ಕೊಡುಗೆ ಕನ್ನಡಕ್ಕೂ ಸಹ ಇದೆ. 1967ರಲ್ಲಿ ಬಿಡುಗಡೆಯಾದ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಕನ್ನಡ ಚಲನಚಿತ್ರದಲ್ಲಿನ “ಬೆಳ್ಳನೆ ಬೆಳಗಾಯಿತು” ಮತ್ತು “ಎಲ್ಲಾರೆ ಇರತೀರೋ ಎಂದಾರೆ ಬರತೀರೋ” ಹಾಡುಗಳನ್ನು ಹಾಡಿ ತಮ್ಮದೇ ಆದ ನೆನಪನ್ನು ಬಿಟ್ಟು ಹೋಗಿದ್ದಾರೆ.

ಇನ್ನು ಲತಾ ಅವರಿಗೆ ಭಾರತದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನ(2001), ಪದ್ಮಭೂಷಣ(1969), ಪದ್ಮ ವಿಭೂಷಣ(1999), 6 ವಿಶ್ವವಿದ್ಯಾಲಯಗಳ ಗೌರವ ಡಾಕ್ಟೊರೇಟ್ (ನ್ಯೂಯಾರ್ಕ್ ವಿಶ್ವವಿದ್ಯಾಲಯವೂ ಸೇರಿದಂತೆ), ಫ್ರಾನ್ಸ್ ಸರ್ಕಾರ ನೀಡುವ ’ಆಫೀಸರ್ ಆಫ್ ದ ಲೀಜಿಯನ್ ಆಫ್ ಆನರ್’ ಪ್ರತಿಷ್ಠಿತ ಪ್ರಶಸ್ತಿ, ಶಾಂತಿನಿಕೇತನದಿಂದ ದೇಶಿಕೋತ್ತಮ ಪ್ರಶಸ್ತಿ, ಆಸ್ಥಾನ ವಿದ್ವಾನ್, ತಿರುಪತಿ ದೇವಸ್ಥಾನಮ್ ಸೇರಿದಂತೆ ಅನೇಕ ಫಿಲ್ಮ್ ಫೇರ್ ಪ್ರಶಸ್ತಿಗಳು ಸಂದಿವೆ.

ಲತಾ ಮಂಗೇಶ್ಕರ್ ಅವರು 6 ಫೆಬ್ರವರಿ 2022ರಂದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ತಮ್ಮ 92 ನೇ ವಯಸ್ಸಿನಲ್ಲಿ ನಿಧನರಾದರು.

🔸ಪೀಪಲ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/GBc6sg7E2FQLuXblEdBxSi

ಇದನ್ನೂ ನೋಡಿ: tax on share profit | ಶೇರು ಮಾರುಕಟ್ಟೆಯಲ್ಲಿ ಗಳಿಸಿದ ಆದಾಯದ ಮೇಲೆ ಎಷ್ಟು ತೆರಿಗೆ ಕಟ್ಟಬೇಕು ಎಂಬುದು ನಿಮಗೆ ಗೊತ್ತೆ?

ಶೇರು ಮಾರುಕಟ್ಟೆಯಲ್ಲಿ ಗಳಿಸಿದ ಆದಾಯದ ಮೇಲೆ ಎಷ್ಟು ತೆರಿಗೆ ಕಟ್ಟಬೇಕು ಎಂಬುದು ನಿಮಗೆ ಗೊತ್ತೆ? ಈಶಾನ್ಯ ತಲ್ಲೂರು ಅವರ ಈ ಮಾತುಗಳನ್ನು ಕೇಳಿಸಿಕೊಳ್ಳಿ.

https://fb.watch/fPBCz6OqVp/

Related Articles

ಇತ್ತೀಚಿನ ಸುದ್ದಿಗಳು

You cannot copy content of this page