Wednesday, June 18, 2025

ಸತ್ಯ | ನ್ಯಾಯ |ಧರ್ಮ

ಶಿವಮೊಗ್ಗ: ಬಿಜೆಪಿ ತೊರೆದು ಕೆಎಸ್ ಈಶ್ವರಪ್ಪ ಸಂಘಟನೆ ಸೇರಿದ ‘ರಾಷ್ಟ್ರಭಕ್ತರು’

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ತನ್ನದೇ ಆದ ಸಂಘಟನೆ ಹುಟ್ಟು ಹಾಕಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ರಾಜಕೀಯದಲ್ಲಿ ಸಕ್ರಿಯವಾಗುವತ್ತ ಹೆಜ್ಜೆ ಇರಿಸಿದ್ದಾರೆ. ಇದರ ಪರಿಣಾಮವಾಗಿ ಶಿವಮೊಗ್ಗದಲ್ಲಿ ಹಲವು ಮಂದಿ ಬಿಜೆಪಿ ನಾಯಕರು ಬಿಜೆಪಿ ತೊರೆದು ಈಶ್ವರಪ್ಪ ಅವರ ರಾಷ್ಟ್ರಭಕ್ತರ ಬಳಗವನ್ನು ಸೇರಿದರು.

ಶಿವಮೊಗ್ಗ ಜಿಲ್ಲಾದ್ಯಂತ ಯಡಿಯೂರಪ್ಪ ಮತ್ತವರ ಕುಟುಂಬದ, ಕುಟುಂಬ ರಾಜಕಾರಣದ ವಿರುದ್ಧ ದನಿ ಎತ್ತಿದ ಈಶ್ವರಪ್ಪ ಈಗ ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗಲು ಹೊರಟಿದ್ದಾರೆ. ಶಿವಮೊಗ್ಗದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಯ ವಿವಿಧ ನಗರಸಭಾ ವಾರ್ಡ್ ಗಳ ಅಧ್ಯಕ್ಷರುಗಳು, ಸ್ಥಳೀಯ ಮುಖಂಡರು ಬಿಜೆಪಿ ತೊರೆದು ಈಶ್ವರಪ್ಪ ಅವರ ರಾಷ್ಟ್ರಭಕ್ತರ ಬಳಗ ಸಂಘಟನೆಗೆ ಸೇರ್ಪಡೆಯಾಗಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಹಾಗೂ ರಾಜ್ಯದಲ್ಲಿ ಬಿಜೆಪಿಯ ಅಪ್ಪ ಮಕ್ಕಳ ಸರ್ವಾಧಿಕಾರ ದೂರ ಇಡಲು ಈ ನಡೆ ಅನಿವಾರ್ಯ ಎಂಬ ಉದ್ದೇಶದಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹುಟ್ಟು ಹಾಕಿದ್ದ ಸಂಘಟನೆ ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page