Sunday, June 29, 2025

ಸತ್ಯ | ನ್ಯಾಯ |ಧರ್ಮ

ಅನಗತ್ಯವಾಗಿ ಮರ ಕಡಿದರೆ ಕಾನೂನು ಕ್ರಮ – ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು : ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯಲ್ಲಿನ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮತ್ತು ಹೆಚ್ಚಿನ ದಂಡ ಹಾಕಲು ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿಂದು ಕೆ.ಡಿ.ಪಿ ಮತ್ತು ಎಂ.ಎಂ.ಆರ್.‌ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಸುಪ್ರೀಂಕೋರ್ಟ್‌ ಸಹ ಹೆಚ್ಚಿನ ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಮಾನ ಬದಲಾವಣೆಯ ಪ್ರಸಕ್ತ ಸನ್ನಿವೇಶದಲ್ಲಿ ವೃಕ್ಷ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಅಭಿವೃದ್ಧಿಯ ಹೆಸರಲ್ಲಿ ನೂರಾರು ಮರಗಳ ಕಡಿತಲೆಗೆ ಅನುಮತಿ ನೀಡುತ್ತಿರುವ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಮರ ಕಡಿಯಲು ಅನುಮತಿ ನೀಡಬಾರದು ಎಂದು ಸೂಚನೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page