Tuesday, January 27, 2026

ಸತ್ಯ | ನ್ಯಾಯ |ಧರ್ಮ

ಕೆ.ಆರ್.ಪೇಟೆಯಲ್ಲಿ ಬೋನಿಗೆ ಬಿದ್ದ ಚಿರತೆ ಸ್ಥಳೀಯರ ನೆಮ್ಮದಿಯ ನಿಟ್ಟುಸಿರು 

ಕೆ.ಆರ್. ಪೇಟೆ : ತಾಲ್ಲೂಕಿನ ಹರಳಹಳ್ಳಿ ಗ್ರಾಮದ ಭೋರಾಲಿಂಗೇಗೌಡರ ಜಮೀನಿನಲ್ಲಿ ಇಡಲಾಗಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ನಡೆದಿದೆ.ಕೆಲವು ದಿನಗಳಿಂದ ಜಮೀನುಗಳ ಬಳಿ ಚಿರತೆ ಕಾಣಿಸಿಕೊಳ್ಳುತ್ತಿದ್ದ ಕಾರಣ ಗ್ರಾಮಸ್ಥರು ಭಯಭೀತರಾಗಿದ್ದರು. ಬೋನಿಗೆ ಚಿರತೆ ಬಿದ್ದ ವಿಚಾರ ತಿಳಿದ ಕೂಡಲೇ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಸುರಕ್ಷಿತವಾಗಿ ಕೊಂಡೊಯ್ದಿದ್ದಾರೆ. ಈ ಮೂಲಕ ಗ್ರಾಮದಲ್ಲಿ ಭಯದ ವಾತಾವರಣದ ನಡುವೆ ಶಾಂತಿ ಮರಳಿ ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page