Friday, June 20, 2025

ಸತ್ಯ | ನ್ಯಾಯ |ಧರ್ಮ

ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲೂ ಬಿಜೆಪಿ ಕಸದ ಬುಟ್ಟಿಗೆ: ರಾಜ್ಯ ಕಾಂಗ್ರೆಸ್‌ ಟೀಕೆ

ಬೆಂಗಳೂರು: ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಜನರು ಹೇಗೆ ತಿರಸ್ಕರಿಸಿದ್ದಾರೆಯೋ, ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ರಾಜ್ಯದ ಜನತೆ ತಿರಸಕ್ಕರಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್‌ ಪಕ್ಷ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಬಿಜೆಪಿ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ. ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು  ವ್ಯಂಗಿಸಿದೆ.

ಜನರ ಸ್ಪಂದನೆಯೇ ಇಲ್ಲದ ಖಾಲಿ ಕುರ್ಚಿಗಳ ಸಮಾವೇಶಗಳನ್ನು ಮಾಡಿದ ಬಿಜೆಪಿ ಪಕ್ಷ ಮತ್ತೆ ಗೆಲ್ಲುತ್ತೇವೆ ಎನ್ನುವುದು ಪರಮಹಾಸ್ಯ. ಕುರ್ಚಿಗಳು ಮತ ಹಾಕುವುದಿಲ್ಲ ಎಂಬುದನ್ನು ಬಿಜೆಪಿ ನಾಯಕರು ಮನಗಾಣಲಿ! ಪ್ರಧಾನಿಯ ಮೆಗಾ ರೋಡ್ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ? ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವಾಗಿದೆಯಲ್ಲವೇ ಎಂದು ರಾಜ್ಯ ಕಾಂಗ್ರೆಸ್‌ ಘಟಕ ಪ್ರಶ್ನಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page