Saturday, June 21, 2025

ಸತ್ಯ | ನ್ಯಾಯ |ಧರ್ಮ

ಚಿತ್ರದುರ್ಗದಲ್ಲಿ ಲೋಕಾಯುಕ್ತ ದಾಳಿ, ಪರಿಶೀಲನೆ

ಸೋಮವಾರ ಬೆಳ್ಳಂಬೆಳಿಗ್ಗೆ ಚಿತ್ರದುರ್ಗದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಚಿತ್ರದುರ್ಗದ ಅರಣ್ಯ ಇಲಾಖೆ ಅಧಿಕಾರಿ ಎಸಿಎಫ್ ನಾಗೇಂದ್ರ ನಾಯಕ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ನಾಗೇಂದ್ರ ಅವರ ಮನೆ, ತವಂದಿ ಗ್ರಾಮದ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮನೆ ಮೇಲೆಯೂ ದಾಳಿ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page