Home ಬೆಂಗಳೂರು ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ, 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ, 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ

0

ಬೆಂಗಳೂರು: ಎಂಟು ಜಿಲ್ಲೆಗಳ ಎಂಟು ಸರ್ಕಾರಿ ಅಧಿಕಾರಿಗಳ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ.

ಅಕ್ರಮ ಆಸ್ತಿ ಪ್ರಕರಣಗಳ ತನಿಖೆಯ ಭಾಗವಾಗಿರುವ ಕಾರ್ಯಾಚರಣೆಯು ಈ ಅಧಿಕಾರಿಗಳಿಗೆ ಸಂಬಂಧಿಸಿದೆಯೆನ್ನಲಾದ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟಗಳನ್ನು ಒಳಗೊಂಡಿದೆ.

ಲೋಕಾಯುಕ್ತ ಮೂಲಗಳ ಪ್ರಕಾರ ಬೆಂಗಳೂರು, ಮಂಡ್ಯ, ಬೀದರ್, ಬೆಳಗಾವಿ, ತುಮಕೂರು, ಗದಗ, ಬಳ್ಳಾರಿ ಮತ್ತು ರಾಯಚೂರಿನಲ್ಲಿ ದಾಳಿ ನಡೆಯುತ್ತಿದೆ.

ಶೋಭಾ – ಜಂಟಿ ಆಯುಕ್ತರು, ಬೆಂಗಳೂರು ಸಾರಿಗೆ ಇಲಾಖೆ; ಎಸ್ ಎನ್ ಉಮೇಶ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಕಡೂರು; ರವೀಂದ್ರ – ನಿರೀಕ್ಷಕರು, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ, ಬೀದರ್; ಪ್ರಕಾಶ ಶ್ರೀಧರ ಗಾಯಕವಾಡ – ತಹಶೀಲ್ದಾರ್, ಖಾನಾಪುರ; ಎಸ್ ರಾಜು – ನಿವೃತ್ತ ಆರ್‌ಟಿಒ ಅಧಿಕಾರಿ, ತುಮಕೂರು; ಹುಚ್ಚೇಶ್ ಅಲಿಯಾಸ್ ಹುಚ್ಚಪ್ಪ – ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಗದಗ ಪುರಸಭೆ; ಆರ್ ಎಚ್ ಲೋಕೇಶ್- ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗಗಳ ಇಲಾಖೆ, ಬಳ್ಳಾರಿ; ಮತ್ತು ಹುಲಿರಾಜ – ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕ್), ರಾಯಚೂರು ಇವರುಗಳಿಗೆ ಸಂಬಂಧಿಸಿದ ಆಸ್ತಿಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಪ್ರಕರಣಗಳಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಗಳ ದಾಖಲೆಗಳು, ಆಸ್ತಿ, ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.

ಇದು ಭ್ರಷ್ಟಾಚಾರ ನಿಗ್ರಹ ದಳದ ಈ ವರ್ಷದ ಮೊದಲ ಪ್ರಮುಖ ಕಾರ್ಯಾಚರಣೆಯಾಗಿದೆ. ಡಿಸೆಂಬರ್ 12ರಂದು ಲೋಕಾಯುಕ್ತರು ಹತ್ತು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಆಸ್ತಿಗಳ ಮೇಲೆ ದಾಳಿ ನಡೆಸಿದ್ದು, 48.55 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಬಹಿರಂಗಪಡಿಸಿದ್ದರು.

You cannot copy content of this page

Exit mobile version