Friday, June 20, 2025

ಸತ್ಯ | ನ್ಯಾಯ |ಧರ್ಮ

ವಿವಿಧ ಅಕ್ರಮ ಮರಳು ಗಣಿಗಾರಿಕೆ ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ, 40 ಲಕ್ಷ ಮೌಲ್ಯದ ಸರಕು ವಶ

ಮಂಗಳೂರು: ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಾಹನಗಳು ಸೇರಿದಂತೆ 40 ಲಕ್ಷ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಲೋಕಯುಕ್ತ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಡಿವೈಎಸ್ಪಿಗಳಾದ ಕಲಾವತಿ, ಚೆಲುವರಾಜು ಬಿ, ಇನ್ಸ್ಪೆಕ್ಟರ್ ಅಮಾನುಲ್ಲಾ ಎ ನೇತೃತ್ವದಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಕೆ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಮೂರು ತಂಡಗಳು ರಚನೆಯಾದ ನಂತರ, ಬೆಳ್ತಂಗಡಿ, ಬಂಟ್ವಾಳ ಮತ್ತು ಮುಲ್ಕಿಯ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದ ಪೊಲೀಸರು, 40 ಲಕ್ಷ ಮೌಲ್ಯದ ಜೆಸಿಬಿ, ಟಿಪ್ಪರ್ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಂಡು ಅವುಗಳನ್ನು ಆಯಾ ಪೊಲೀಸ್ ಠಾಣೆಗಳಿಗೆ ಹಸ್ತಾಂತರಿಸಲಾಗಿದ್ದು, ಅಪರಾಧಿಗಳ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಶುಕ್ರವಾರ ನಡೆದ ಲೋಕಾಯುಕ್ತರ ನೇರ ಫೋನ್ ಇನ್ ನಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 25 ದೂರುಗಳು ಕೇಳಿಬಂದವು. ಈ ದೂರುಗಳಲ್ಲಿ ಕಂದಾಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಮುಡಾಗೆ ಸಂಬಂಧಿಸಿದ ದೂರುಗಳೂ ಸೇರಿವೆ ಮತ್ತು ಅವರ ವಿರುದ್ಧವೂ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಲಕ್ಷ್ಮಿ ಗಣೇಶ್ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page