Home ಬೆಂಗಳೂರು ಮಹಾರಾಷ್ಟ್ರ ಗಡಿ ವಿವಾದ :ರಾಜ್ಯ ಸಿಎಂ ಪರವಾಗಿ ಡಿಕೆಶಿ ಪ್ರತಿಕ್ರಿಯೆ

ಮಹಾರಾಷ್ಟ್ರ ಗಡಿ ವಿವಾದ :ರಾಜ್ಯ ಸಿಎಂ ಪರವಾಗಿ ಡಿಕೆಶಿ ಪ್ರತಿಕ್ರಿಯೆ

0

ಬೆಂಗಳೂರು: ಮಹಾರಾಷ್ಟ್ರ ಜತೆಗಿನ ಗಡಿ ವಿವಾದದ ಬಗ್ಗೆ ಮುಖ್ಯಮಂತ್ರಿಗಳ ಮಾತಿಗೆ ಪ್ರಾಮುಖ್ಯತೆ ನೀಡುತ್ತೇನೆ. ಬೇರೆಯವರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಶುಕ್ರವಾರದಂದು ಮಾತನಾಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್‌, ʼ ಮಹಾರಾಷ್ಟ್ರ ಜತೆಗಿನ ಗಡಿ ವಿವಾದದ ಬಗ್ಗೆ ಮುಖ್ಯಮಂತ್ರಿಗಳ ಮಾತಿಗೆ ಪ್ರಾಮುಖ್ಯತೆ ನೀಡುತ್ತೇನೆ. ಬೇರೆಯವರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಅವರು ತಮ್ಮ ಪಕ್ಷದಲ್ಲಿ ಆಂತರಿಕ ಒಪ್ಪಂದ ಮಾಡಿಕೊಂಡು, ರಾಜ್ಯದ ಗಂಭೀರ ವಿಚಾರಗಳನ್ನು ಮರೆಮಾಚಲು ವಿವಾದಗಳನ್ನು ಎಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಡಿ.6 ರಂದು ಮಹಾರಾಷ್ಟ್ರ ಸಚಿವರು ಬೆಳಗಾವಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವ ಸಲಹೆ ನೀಡುತ್ತೀರಿ ಎಂದು ಕೇಳಿದಾಗ, ‘ ಸರ್ಕಾರ ನಮ್ಮ ಅಭಿಪ್ರಾಯ ಕೇಳಿದರೆ ನಾವು ಸಲಹೆ ನೀಡಬಹುದು. ಆದರೆ ಅವರು ಪ್ರಮುಖ ವಿಚಾರ ಮರೆಮಾಚಲು ವಿವಾದ ಬಳಸಿಕೊಳ್ಳುತ್ತಿದ್ದಾರೆ ‘ ಎಂದು ತಿಳಿಸಿದ್ದಾರೆ.

ಚುನಾವಣಾ ಸಮಿತಿ ರಚನೆ ಹಾಗೂ ಚುನಾವಣೆ ಟಿಕೆಟ್ ಮೊದಲ ಪಟ್ಟಿ ಬಗ್ಗೆ ಆದಷ್ಟು ಶೀಘ್ರವಾಗಿ ಪಟ್ಟಿ ಬರಲಿದೆ ‘ ಎಂದು ಮಾತನಾಡಿದ್ದಾರೆ.

You cannot copy content of this page

Exit mobile version