
ಚಾಮರಾಜನಗರದ ಗುಂಡ್ಲುಪೇಟೆಯ ಹಂಗಳ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ವಸತಿ ಸಚಿವ ವಿ. ಸೋಮಣ್ಣ ಕಾಪಾಳಕ್ಕೆ ಹೊಡೆದ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಂಗಳ ಗ್ರಾಮದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಆಗಿರುವ ಗೊಂದಲ ಮತ್ತು ಈ ಬಗ್ಗೆ ತಮಗಾದ ಆನ್ಯಾಯವನ್ನು ಹೇಳಿಕೊಳ್ಳಲು ಮಹಿಳೆಯೊಬ್ಬರು ಸಚಿವರ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಚಿವರನ್ನು ಪ್ರಶ್ನಿಸಿದ ಮಹಿಳೆಗೆ ವಿ. ಸೋಮಣ್ಣ ಕಾಪಾಳಕ್ಕೆ ಹೊಡೆದಿದ್ದಾರೆ.
ಈ ಬಗ್ಗೆ ಸಾರ್ವಜನಿಕವಾಗಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ತನ್ನ ನೈಜ ಸಂಸ್ಕೃತಿಯನ್ನು ಹೊರಹಾಕಿದೆ. ಸಚಿವ ಸೋಮಣ್ಣ ಬಹಿರಂಗವಾಗಿ ಆ ಮಹಿಳೆಗೆ ಕ್ಷಮೆಯಾಚಿಸ ಬೇಕು ಮತ್ತು ಅವರಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.