Friday, June 20, 2025

ಸತ್ಯ | ನ್ಯಾಯ |ಧರ್ಮ

ಮಳವಳ್ಳಿ ಅತ್ಯಾಚಾರ ಪ್ರಕರಣ : ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ

ಮಂಡ್ಯ : ಅಕ್ಟೋಬರ್‌ 11ರಂದು ಮಳವಳ್ಳಿಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ  ವಿರುದ್ದ ರಾಜ್ಯಾದ್ಯಂತ ಆಕ್ರೋಶ  ವ್ಯಕ್ತವಾಗಿದೆ ಈ ಹಿನ್ನಲೆಯಲ್ಲಿ ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ 10ಲಕ್ಷ ಪರಿಹಾರ ಧನವನ್ನು ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಕಳೆದ ಐದಾರು ದಿನಗಳ ಹಿಂದೆ ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಹಾಗೂ ಕೊಲೆ ಮಾಡಿರುವ ದುರ್ಘಟನೆ ನಡೆದಿತ್ತು. ಕೊಲೆ ಬಳಿಕ ಆಕೆಯ ಮೃತದೇಹವನ್ನು ನಿರ್ಮಾಣ ಹಂತದ ಕಟ್ಟಡದ ಸಂಪ್‌ ಒಳಗೆ ಎಸೆದಿರುವ ಅಮಾನವೀಯ ಘಟನೆ ಸಂಭವಿಸಿತ್ತು.

ಈ ಕುರಿತು ಇಂದು ಶ್ರೀ ಮಲೆಮಹಾದೇಶ್ವರ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ʼಮಳವಳ್ಳಿಯಲ್ಲಿ ಇತ್ತೀಚೆಗೆ ನಡೆದ ಘಟನೆ ಅತ್ಯಂತ ಅಮಾನುಷವಾದುದು. ಈಗಾಗಲೇ ಅರೋಪಿಯನ್ನು ಬಂದಿಸಲಾಗಿದ್ದು, ಆದಷ್ಟು ಬೇಗ ಆರೋಪಿಗೆ ಶಿಕ್ಷೆಯಾಗುತ್ತದೆ. ಈ ಕುರಿತು ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆʼ ಹಾಗೆಯೇ ʼಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ 10ಲಕ್ಷ ರೂ ಪರಿಹಾರ ನೀಡಲಾಗುವುದುʼ ಎಂದು ಹೇಳಿದರು

Related Articles

ಇತ್ತೀಚಿನ ಸುದ್ದಿಗಳು

You cannot copy content of this page