Home ಅಪರಾಧ ಕರ್ನಾಟಕದಲ್ಲಿ ನಟನಿಂದ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

ಕರ್ನಾಟಕದಲ್ಲಿ ನಟನಿಂದ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

0

ಬೆಂಗಳೂರು: ಕರ್ನಾಟಕದಲ್ಲಿ ನಟರೊಬ್ಬರು ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮಾಡಿ ದೂರು ದಾಖಲಿಸಿದ್ದಾರೆ.

31 ವರ್ಷದ ಈ ನಟನ ಈ ದೂರಿನ ಮೇಲೆ ಶನಿವಾರದಂದು ಬೆಂಗಳೂರು ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಎಫ್‌ಐಆರ್‌ನ ಪ್ರಕಾರ, 2012 ರಲ್ಲಿ ಬಾವುಟ್ಟಿಯುಡೆ ನಾಮತಿಲ್ ಚಿತ್ರದ ಶೂಟಿಂಗ್‌ನಲ್ಲಿ ನಟ ಮಮ್ಮುಟ್ಟಿ ಅವರನ್ನು ಭೇಟಿ ಮಾಡಲು ಹೋದಾಗ ಕೇರಳದ ಕೋಝಿಕ್ಕೋಡ್‌ನಲ್ಲಿ ಬಾಲಕೃಷ್ಣನ್ ಅವರನ್ನು ಭೇಟಿಯಾಗಿದ್ದಾಗಿ ನಟ ಹೇಳಿಕೊಂಡಿದ್ದಾರೆ. ಈ ಚಲನಚಿತ್ರವನ್ನು ಬಾಲಕೃಷ್ಣನ್ ಬರೆದು ನಿರ್ದೇಶಿಸಿದ್ದರು.

ಇದಾದ ಬಳಿಕ, ಬಾಲಕೃಷ್ಣನ್ ಡಿಸೆಂಬರ್ 2012 ರಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹೋಟೆಲ್‌ಗೆ ದೂರುದಾರರನ್ನು ಕರೆದಿದ್ದಾರೆ. ನಿರ್ದೇಶಕರು ಈ ನಟನಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಆರಂಭದಲ್ಲಿ ಕೇರಳದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಆದರೆ ನಗರದ ಹೋಟೆಲ್‌ನಲ್ಲಿ ಘಟನೆ ನಡೆದಿರುವ ಕಾರಣ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ.

ಈ ಘಟನೆಯು 2012 ರಲ್ಲಿ ನಡೆದಿದೆ ಎಂದು ಹೇಳಲಾಗಿದೆ ಆದರೆ ಮಲಯಾಳಂ ಚಲನಚಿತ್ರೋದ್ಯಮದ ಅನೇಕ ಕಲಾವಿದರ ಮೇಲೆ ಲೈಂಗಿಕ ಕಿರುಕುಳದ ಆರೋಪಗಳು ಹೇಮಾ ಕಮಿಟಿಯ ನಂತರ ಹೊರಬಂದಿರುವ ಹಿನ್ನೆಲೆಯಲ್ಲಿ ದೂರುದಾರರು ಈಗ ಈ ವಿಚಾರವನ್ನು ಹೊರಹಾಕಿದ್ದಾರೆ, ಕೇರಳದ ಈ ಬೆಳವಣಿಗೆ ತನಗೆ ಈ ಧೈರ್ಯ ನೀಡಿತು ಎಂದು ಅವರು ಹೇಳಿದ್ದಾರೆ.

ಜಸ್ಟಿಸ್ ಹೇಮಾ ಸಮಿತಿಯ ವರದಿಯ ಬಿಡುಗಡೆಯ ನಂತರ ತಮ್ಮ ಸಹೋದ್ಯೋಗಿಗಳ ಮೇಲೆ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿರುವ ಮಲಯಾಳಂ ಚಲನಚಿತ್ರೋದ್ಯಮದ ಹಲವಾರಲ್ಲಿ ಈ ನಟ ಕೂಡ ಸೇರಿದ್ದಾರೆ .

ಬಾಲಕೃಷ್ಣನ್ ವಿರುದ್ಧ ಅಸ್ವಾಭಾವಿಕ ಅಪರಾಧಗಳು ಮತ್ತು ಖಾಸಗಿತನದ ಉಲ್ಲಂಘನೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ. “ಈ ವಿಷಯವನ್ನು ತನಿಖೆ ಮಾಡಲಾಗುತ್ತಿದೆ” ಎಂದು ಅವರು ಹೇಳಿದರು.

ಆಗಸ್ಟ್‌ನಲ್ಲಿ, 2009 ರಲ್ಲಿ ನಟನೊಬ್ಬ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ನಂತರ ಬಾಲಕೃಷ್ಣನ್ ಅವರು ಕೇರಳ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪಲೇರಿ ಮಾಣಿಕ್ಯಂ: ಒರು ಪತಿರಕೋಲಪಾಠಕತಿಂತೆ ಕಥಾ ಸಿನಿಮಾ ನಿರ್ಮಾಣವಾಗುತ್ತಿದ್ದಾಗ ನಿರ್ದೇಶಕರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿಯೊಬ್ಬರು ಆರೋಪಿಸಿದ್ದರು.

ಈ ಆರೋಪಗಳು ತನ್ನ ಮೇಲಿನ ಸಂಘಟಿತ ದಾಳಿಯ ಭಾಗವಾಗಿದೆ ಎಂದು ನಿರ್ದೇಶಕ ಆ ಸಮಯದಲ್ಲಿ ಹೇಳಿಕೊಂಡಿದ್ದರು.

“ಒಬ್ಬ ವ್ಯಕ್ತಿಯಾಗಿ ಆರೋಪವು ನನ್ನ ಮೇಲೆ ಉಂಟು ಮಾಡಿದ ಹಾನಿಯನ್ನು ತಕ್ಷಣವೇ ಸರಿಪಡಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು. “ಆದರೂ, ಆರೋಪ ತಪ್ಪು ಎಂದು ನಾನು ಸಾಬೀತುಪಡಿಸಬೇಕಾಗಿದೆ. ಅದು ಸುಳ್ಳು ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುತ್ತೇನೆ. ಆಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾಳೆ. ಏನೇ ಆಗಲಿ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇನೆ,” ಎಂದು ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದರು.

You cannot copy content of this page

Exit mobile version