ರಾಮನಗರ: ಜಿಲ್ಲೆಯಲ್ಲಿ ಮಳೆಯ ಹಾನಿಯಿಂದ ತೊಂದರೆ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಸೋಮವಾರ (ಆಗಸ್ಟ್ 29) ಮಧ್ಯಾಹ್ನ ಭೇಟಿ ನೀಡಲಿದ್ದಾರೆ.
ರಾಮನಗರ, ಚನ್ನಪಟ್ಟಣ ತಾಲ್ಲೂಕುಗಳಿಗೆ ಭೇಟಿ ನೀಡಿ ಮಳೆಹಾನಿಯನ್ನು ವೀಕ್ಷಿಸಲಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸಹ ಜೊತೆಗಿರಲಿದ್ದಾರೆ.