Home ರಾಜಕೀಯ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನವೇ ಮಮತಾ ಬ್ಯಾನರ್ಜಿಯಿಂದ ಟ್ಯಾಗೋರ್ ಜಯಂತಿ ಆಚರಣೆ

ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನವೇ ಮಮತಾ ಬ್ಯಾನರ್ಜಿಯಿಂದ ಟ್ಯಾಗೋರ್ ಜಯಂತಿ ಆಚರಣೆ

0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಿರ್ಗಮಿತ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಶನಿವಾರ ಗುರುದೇವ ರವೀಂದ್ರನಾಥ ಟ್ಯಾಗೋರ್ ಅವರ 165ನೇ ಜಯಂತಿಯನ್ನು ಆಚರಿಸಲಿದ್ದಾರೆ. ವಿಶೇಷವೆಂದರೆ, ಅದೇ ದಿನ ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಭಾರತೀಯ ಜನತಾ ಪಕ್ಷದ (BJP) ಸರ್ಕಾರವು ಅಸ್ತಿತ್ವಕ್ಕೆ ಬರಲಿದ್ದು, ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿರುವ ಟಿಎಂಸಿ, ರವೀಂದ್ರ ಜಯಂತಿ ಆಚರಣೆಗೆ ತಾನು ಸಲ್ಲಿಸಿದ ಅನುಮತಿ ಅರ್ಜಿಯನ್ನು ಬಿಜೆಪಿ ಸೂಚನೆಯ ಮೇರೆಗೆ ಅಧಿಕಾರಿಗಳು ತಿರಸ್ಕರಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ.

ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತಾದ ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದ ಬಳಿಯೇ ರವೀಂದ್ರ ಜಯಂತಿಯನ್ನು ಆಚರಿಸಲು ನಿರ್ಧರಿಸಿದ್ದಾರೆ. “ಇದು ಹೊಸ ಬಂಗಾಳ ಮತ್ತು ಇಲ್ಲಿ ನಡೆಯುತ್ತಿರುವ ‘ಪರಿವರ್ತನೆ’. ರಾಜಕೀಯೇತರ ಸಂಸ್ಥೆಗಳು ಮೂರು ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಕೋರಿದ್ದರೂ, ಎಲ್ಲವನ್ನೂ ನಿರಾಕರಿಸಲಾಗಿದೆ. ಆದ್ದರಿಂದ ನಾವು ನಮ್ಮ ಅಧ್ಯಕ್ಷರ ನಿವಾಸದ ಪಕ್ಕದಲ್ಲೇ ಕವಿಗುರು ರವೀಂದ್ರನಾಥ ಟ್ಯಾಗೋರ್ ಅವರಿಗೆ ಗೌರವ ಸಲ್ಲಿಸಲು ಕಾರ್ಯಕ್ರಮವನ್ನು ಮುಂದುವರಿಸುತ್ತೇವೆ” ಎಂದು ಟಿಎಂಸಿ ತನ್ನ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಅಲ್ಲದೆ, “ಬಿಜೆಪಿ ಇದನ್ನು ನೆನಪಿಟ್ಟುಕೊಳ್ಳಲಿ – ನಮ್ಮ ಹೃದಯ ಮತ್ತು ಆತ್ಮದಿಂದ ಕವಿಗುರು ರವೀಂದ್ರನಾಥ ಟ್ಯಾಗೋರ್ ಅವರನ್ನು ಕಿತ್ತೊಗೆಯಲು ನಿಮ್ಮಿಂದ ಸಾಧ್ಯವಿಲ್ಲ” ಎಂದು ಟಿಎಂಸಿ ಆಕ್ರೋಶ ವ್ಯಕ್ತಪಡಿಸಿದೆ.

You cannot copy content of this page

Exit mobile version