Home ಅಪರಾಧ ನಿಲ್ಲದ ಮೆಟ್ರೋ ಆತ್ಮಹತ್ಯೆ ದುರಂತ ; ಸಿಬ್ಬಂದಿ ಮುಂಜಾಗ್ರತೆಯಿಂದ ಉಳಿಯಿತು ಜೀವ

ನಿಲ್ಲದ ಮೆಟ್ರೋ ಆತ್ಮಹತ್ಯೆ ದುರಂತ ; ಸಿಬ್ಬಂದಿ ಮುಂಜಾಗ್ರತೆಯಿಂದ ಉಳಿಯಿತು ಜೀವ

0

ಬೆಂಗಳೂರು: ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ರೈಲು ಬರಲು ಇನ್ನು ಕೆಲವೇ ನಿಮಿಷಗಳು ಇರುವಾಗ ಏಕಾಏಕಿ ವ್ಯಕ್ತಿಯೊಬ್ಬ ಟ್ರ್ಯಾಕ್ ಗೆ ಜಿಗಿದಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಮೆಟ್ರೋ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ವಿವರ ಲಭ್ಯವಾಗಿಲ್ಲ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಏಕಾಏಕಿ ವ್ಯಕ್ತಿ ನಮ್ಮ ಮೆಟ್ರೋಗೆ ಜಿಗಿದಿದ್ದು ಇದನ್ನು ಗಮನಿಸಿದ ಕೂಡಲೇ ಸಿಬ್ಬಂದಿಗಳು ರೈಲು ಸಂಚಾರವನ್ನು ಸ್ಥಗಿತಗೊಳಿಸಿ ಆತನನ್ನು ಬಚಾಚ್ ಮಾಡಿದ್ದಾರೆ.

ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

You cannot copy content of this page

Exit mobile version