ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ಶಂಕಿತ ಉಗ್ರರು ಸೋಮವಾರ ದಾಳಿ ನಡೆಸಿದ್ದಾರೆ. ಕಾಂಗ್ಪೋಕ್ಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 37ರಲ್ಲಿ ಸೋಮವಾರ ಬೆಳಗ್ಗೆ ಶಸ್ತ್ರಸಜ್ಜಿತ ಹೊಂಚುದಾಳಿ ನಡೆದಿದೆ.
ಈ ಘಟನೆಯಲ್ಲಿ ಸಿಎಂ ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.
ಜೂನ್ 6ರಂದು, ಜಿರಿಬಾಮ್ನ ವ್ಯಕ್ತಿಯೊಬ್ಬರು ಕೊಲ್ಲಲ್ಪಟ್ಟು ಅಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪವನ್ನು ಪಡೆದುಕೊಂಡಿತ್ತು. ಕಳೆದ ಕೆಲ ದಿನಗಳಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಇಲ್ಲಿಗೆ ಸಿಎಂ ಬಿರೇನ್ ಸಿಂಗ್ ಭೇಟಿ ನೀಡಲು ಪ್ಲಾನ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬೆಂಗಾವಲು ಪಡೆ ಇಂಫಾಲದಿಂದ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿದ್ದಾಗ ದಾಳಿ ನಡೆದಿದೆ.
ಏತನ್ಮಧ್ಯೆ, ಜಿರಿಬಾಮ್ನಲ್ಲಿ ವ್ಯಕ್ತಿಯ ಹತ್ಯೆಯ ನಂತರ, ಕೆಲವು ಅರಾಜಕತಾವಾದಿಗಳು ಎರಡು ಪೊಲೀಸ್ ಔಟ್ಪೋಸ್ಟ್ಗಳು, ಫಾರೆಸ್ಟ್ ಬೀಟ್ ಆಫೀಸ್ ಮತ್ತು ಮೇಥಿ ಮತ್ತು ಕುಕಿ ಬುಡಕಟ್ಟು ಜನಾಂಗದ ಸುಮಾರು 70 ಮನೆಗಳನ್ನು ಸುಟ್ಟು ಹಾಕಿದ್ದಾರೆ. ಘಟನೆಯ ನಂತರ ನೂರಾರು ನಾಗರಿಕರು ಈ ಪ್ರದೇಶದಿಂದ ಓಡಿಹೋಗಿದ್ದಾರೆ.