ನವದೆಹಲಿ: ಹೊಸ ಅಬಕಾರಿ ನೀತಿಯ ಹಗರಣಗಳಿಗೆ ಸಂಬಂಧಿಸಿದಂತೆ ದೆಹಲಿಯ ಉಪಮಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲಾ ಆರೊಪಿಗಳ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಎಫ್ಐಆರ್ ದಾಖಲಿಸಿ ಲುಕ್ಔಟ್ ನೋಟಿಸ್ ಜಾರಿಮಾಡಿದೆ.
ಟೆಂಡರ್ ನಂತರದ ಸನ್ನದುದಾರರಿಗೆ ಅನೂಕೂಲ ಮಾಡಿಕೊಡಲು ಹೊಸ ಅಬಕಾರಿ ನೀತಿಯನ್ನು ರಚಿಸಲಾಗಿತ್ತು, ಈ ನೀತಿಯನ್ನು ದುರುಪಯೋಗಪಡಿಸಿಕೊಂಡು ಅಕ್ರಮ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.