ನವದೆಹಲಿ: 70 ವರ್ಷಗಳಲ್ಲಿ ಇತರ ಯಾವ ಪಕ್ಷಗಳು ಶಿಕ್ಷಣ ಕ್ಷೇತ್ರದಲ್ಲಿ ಮಾಡಲು ಸಾಧ್ಯವಾಗದ ಕೆಲಸವನ್ನು ಮನೀಶ್ ಸಿಸೋಡಿಯಾ (ದೆಹಲಿ ಉಪಮುಖ್ಯಮಂತ್ರಿ) ಮಾಡಿದ್ದಾರೆ, ಎಸ್ಟೋ ಸರ್ಕಾರಿ ಶಾಲೆಗಳನ್ನು ಸುಧಾರಿಸಿದ ಅವರಿಗೆ ಇಡೀ ದೇಶದ ಶಿಕ್ಷಣ ವ್ಯವಸ್ಥೆಯನ್ನು ಒಪ್ಪಿಸಬೇಕು ಮತ್ತು ಅಂಥವರಿಗೆ ಭಾರತ ರತ್ನ ಸಿಗಬೇಕು, ಬದಲಾಗಿ ಸಿಬಿಐ ದಾಳಿ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೇಸರ ವ್ಯಕ್ತಪಡಿಸಿದರು.
ನಮ್ಮ ಸರ್ಕಾರವು ಮೊಹಲ್ಲಾ ಕ್ಲಿನಿಕ್ಗಳಂತೆ ನಗರಗಳು ಮತ್ತು ಹಳ್ಳಿಗಳಲ್ಲಿ ಆರೋಗ್ಯ ಚಿಕಿತ್ಸಾಲಯಗಳನ್ನು ತೆರೆದು ಎಲ್ಲಾ ಗುಜರಾತಿಗಳಿಗೆ ಉಚಿತ ಮತ್ತು ಉತ್ತಮ ಆರೋಗ್ಯ ಒದಗಿಸುವ ಭರವಸೆ ನೀಡುತ್ತೇವೆ. ಸರ್ಕಾರಿ ಆಸ್ಪತ್ರೆಗಳನ್ನು ಸುಧಾರಿಸಿ ಅಗತ್ಯವಿದ್ದರೆ ಹೊಸ ಸರ್ಕಾರಿ ಆಸ್ಪತ್ರೆಗಳನ್ನು ತೆರೆಯುತ್ತೇವೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು.