Monday, July 28, 2025

ಸತ್ಯ | ನ್ಯಾಯ |ಧರ್ಮ

‘ಮೈತ್ರಿ’ ಕಾರಣ : ಪರಿಷತ್ ಸದಸ್ಯತ್ವಕ್ಕೆ ಜೆಡಿಎಸ್ ನ ಮರಿತಿಬ್ಬೇಗೌಡ ರಾಜೀನಾಮೆ

ನಾಲ್ಕು ಬಾರಿ ಶಾಸಕರಾಗಿದ್ದ ಜೆಡಿಎಸ್‌ನ ಮರಿತಿಬ್ಬೇಗೌಡ ಅವರು ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಮಾರ್ಚ್ 21 ರಂದು ಹುಬ್ಬಳ್ಳಿಯ ತಮ್ಮ ನಿವಾಸ-ಕಚೇರಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರು ಹಾಗೂ ಹಿತೈಷಿಗಳ ಸಲಹೆ ಪಡೆದು ಈ ನಿರ್ಧಾರ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮತ್ತು ಅವರ ಪುತ್ರರಾದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತು ಎಚ್‌ಡಿ ರೇವಣ್ಣ ಅವರುಗಳು ಮಾತ್ರ ಜೆಡಿಎಸ್‌ನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈಗಿನ ಬಿಜೆಪಿ ಜೊತೆಗಿನ ಹೊಂದಾಣಿಕೆ ಕೂಡಾ ಅವರದ್ದೇ ಸ್ವಂತ ನಿರ್ಧಾರ.

ಇನ್ನು ಬಿಜೆಪಿಯೊಂದಿಗೆ ಹೊಂದಾಣಿಕೆ ಸೇರಿದಂತೆ ಪಕ್ಷದ ಯಾವುದೇ ನಿರ್ಧಾರದ ಬಗ್ಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಯಾವುದೇ ಸಮಾಲೋಚನೆ ನಡೆಸಿಲ್ಲ. ದೇವೇಗೌಡರ ಕುಟುಂಬದ ಹೊರತಾಗಿ ಯಾವ ನಿರ್ಧಾರಗಳೂ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ವರೆಗೂ ಬರುವುದಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page