ಚಂದನವನದ ಪ್ರತಿಭಾವಂತ ನಟ ಅಜಯ್ ರಾವ್ ಹೊಸದೊಂದು ಸಿನಿಮಾಗೆ ಸಜ್ಜಾಗುತ್ತಿದ್ದಾರೆ. ಆದರೆ, ಇಲ್ಲಿ ಕೇವಲ ನಾಯಕರಾಗಿ ಅಲ್ಲ, ನಿರ್ಮಾಪಕರಾಗಿ ಕೂಡಾ. ಪವನ್ ಭಟ್ ನಿರ್ದೇಶನದ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದು ಈ ಚಿತ್ರದ ನಿರ್ಮಾಣವನ್ನು ಅಜಯ್ ರಾವ್ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ ನಟ ಅಜಯ್ ರಾವ್.
ನಿರ್ದೇಶಕ ಪವನ್ ಭಟ್ಹೇಲಿದ ಕಥೆ ಕೇಳಿ ಇಂಪ್ರೆಸ್ ಆಗಿರುವ ಅಜಯ್ ರಾವ್ ತಮ್ಮದೇ ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಮಾಡಲು ಡಿಸೈಡ್ ಮಾಡಿದ್ದಾರೆ. ‘ಕಟಿಂಗ್ ಶಾಪ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಪವನ್ ಭಟ್ ಎರಡನೇ ಸಿನಿಮಾವಿದು. ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದು ಹೊಸ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದೆ. ಸದ್ಯದಲ್ಲೇ ಟೈಟಲ್ ಹಾಗೂ ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.

🔸 ಪೀಪಲ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo
ಇದನ್ನೂ ನೋಡಿ: ಕಸ್ತೂರ್ಬಾ ಮತ್ತು ಗಾಂಧೀಜಿಯವರ ದಾಂಪತ್ಯ ಜೀವನ ಮತ್ತು ಅವರಿಬ್ಬರ ಮಧ್ಯೆ ಇದ್ದಂತಹ ಪ್ರೀತಿಯ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು
ಅವರಿಬ್ಬರ ಪ್ರೀತಿಯ ಬಂಧನ ಹೇಗಿತ್ತು? ಎಂಬುದನ್ನ ತಿಳಿಯಲು ಈ ವೀಡಿಯೋ ನೋಡಿ ನಿಮ್ಮ ಕಣ್ಣ ಮುಂದೆಯೇ ಅವರ ಪ್ರೀತಿ ಹಾದು ಹೋಗುವಂತೆ ಖ್ಯಾತ ವಾಗ್ಮಿ ‘ನಿಕೇತ್ ರಾಜ್’ ಮಾತನಾಡಿದ್ದಾರೆ
peepal/ಪೀಪಲ್ ಪೇಜನ್ನು ಲೈಕ್ ಮಾಡಿ ಶೇರ್ ಮಾಡಿ ಫಾಲೋ ಮಾಡಿ
ನಿರಂತರ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗುಂಪಿಗೆ ಸೇರಲು ಈ ಕೆಳಗಿನ ಲಿಂಕನ್ನು ಒತ್ತಿ