ಬಹುಜನ ಸಮಾಜ ಪಕ್ಷ (ಬಿಎಸ್ಪಿ) ವರಿಷ್ಠೆ ಮಾಯಾವತಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಸೋಮವಾರ ಘೋಷಿಸಿದ್ದಾರೆ. ಇದರ ಜೊತೆಗೆ ಮೈತ್ರಿಯೊಂದಿಗೆ ಪಕ್ಷದ ಅನುಭವಗಳು ಎಂದಿಗೂ ಪ್ರಯೋಜನಕಾರಿಯಾಗುವುದಿಲ್ಲ ಎಂದು ಮಾಯಾವತಿ ಹೇಳಿದ್ದಾರೆ.
ಇತ್ತ ಚುನಾವಣೋತ್ತರ ಮೈತ್ರಿ ಸಾಧ್ಯತೆ ಬಗ್ಗೆಯೂ ಮಾತನಾಡಿದ ಆ ನಿರ್ಧಾರದ ಬಗ್ಗೆ ತಡವಾಗಿ ತಿಳಿಸುತ್ತೇನೆ ಎಂದಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, ‘ಮೈತ್ರಿಯಿಂದ ನಾವು ಹೆಚ್ಚು ನಷ್ಟವನ್ನು ಅನುಭವಿಸುತ್ತೇವೆ. ಈ ಕಾರಣಕ್ಕಾಗಿಯೇ ದೇಶದ ಬಹುತೇಕ ಪಕ್ಷಗಳು ಬಿಎಸ್ ಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಬಯಸುತ್ತಿವೆ. ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯೋಚಿಸಬಹುದು. ಸಾಧ್ಯವಾದರೆ, ಬಿಎಸ್ಪಿ ಚುನಾವಣೆಯ ನಂತರ ತನ್ನ ಬೆಂಬಲವನ್ನು ನೀಡಬಹುದು … ನಮ್ಮ ಪಕ್ಷವು ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸಲಿದೆ’ ಎಂದು ಹೇಳಿದ್ದಾರೆ.
ಹಿಂದುಳಿದ ಸಮುದಾಯಗಳು, ದಲಿತರು, ಆದಿವಾಸಿಗಳು ಮತ್ತು ಮುಸ್ಲಿಮರ ಬೆಂಬಲದೊಂದಿಗೆ ನಾವು 2007 ರಲ್ಲಿ ಯುಪಿಯಲ್ಲಿ ಪೂರ್ಣ ಬಹುಮತದ ಸರ್ಕಾರವನ್ನು ರಚಿಸಿದ್ದೇವೆ ಮತ್ತು ಅದಕ್ಕಾಗಿಯೇ ನಾವು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ನಾವು ಜಾತಿವಾದಿ ಮತ್ತು ಕೋಮುವಾದವನ್ನು ನಂಬುವವರಿಂದ ಅಂತರವನ್ನು ಕಾಯ್ದುಕೊಳ್ಳುತ್ತೇವೆ…ಬಿಎಸ್ಪಿಗೆ ಅನುಕೂಲಕರವಾದ ತೀರ್ಪು ಪಡೆಯಲು ನಾವು ಸಂಪೂರ್ಣ ಶಕ್ತಿಯೊಂದಿಗೆ ಕೆಲಸ ಮಾಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.