Saturday, June 21, 2025

ಸತ್ಯ | ನ್ಯಾಯ |ಧರ್ಮ

ಮೆಡಿಕಲ್‌ ಸೀಟ್‌ ಸಿಗದ ಕಾರಣ ಮನನೊಂದು ವಿದ್ಯಾರ್ಥಿನಿ ಸಾವು

ದಾವಣಗೆರೆ: ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ರ‍್ಯಾಂಕ್ ಬಂದ ಕಾರಣ, ಮೆಡಿಕಲ್‌ ಸೀಟ್‌ ಕೈತಪ್ಪಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜಗಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಚೈತ್ರಾ (18) ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಮುಸ್ಲಿಂ ಕಾಲೋನಿಯವರು ಎಂದು ತಿಳಿದು ಬಂದಿದೆ.

ಮೆಡಿಕಲ್ ಓದಬೇಕು ಎಂದು ಕನಸು ಕಂಡಿದ್ದ ಚೈತ್ರ, ಪಿಯುಸಿ ಮುಗಿಸಿದ ಬಳಿಕ ಸಿಇಟಿ ಪರೀಕ್ಷೆಗಾಗಿ ಕಷ್ಟಪಟ್ಟು ಓದಿದ್ದಳು. ಆದರೆ ಸಿಇಟಿಯಲ್ಲಿ ಕಡಿಮೆ ರ‍್ಯಾಂಕ್ ಬಂದಿದ್ದ ಕಾರಣ ಮೆಡಿಕಲ್ ಸೀಟು ಕೈ ತಪ್ಪಿದ್ದು, ಈ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page