Saturday, June 21, 2025

ಸತ್ಯ | ನ್ಯಾಯ |ಧರ್ಮ

ಚುನಾವಣಾ ರಾಜಕೀಯದಿಂದ ಸಚಿವ ಕೆಎನ್ ರಾಜಣ್ಣ ನಿವೃತ್ತಿ ಘೋಷಣೆ

ವಯಸ್ಸಿನ ಕಾರಣದಿಂದಾಗಿ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ. ಹೀಗಾಗಿ ಇದು ನನ್ನ ಚುನಾವಣಾ ರಾಜಕೀಯದಿಂದ ನಾನು ನಿವೃತ್ತಿ ಘೋಷಿಸುವುದಾಗಿ ಸಚಿವ ರಾಜಣ್ಣ ಹೇಳಿಕೊಂಡಿದ್ದಾರೆ.

ಮೈಸೂರಲ್ಲಿ ಮಾತನಾಡಿದ ಸಚಿವ ರಾಜಣ್ಣ ಯುವಕರಿಗೆ ಅವಕಾಶ ಸಿಗಬೇಕು ಎಂಬ ದೃಷ್ಟಿಯಿಂದ ಚುನಾವಣೆಗೆ ಸ್ಪರ್ಧೆ ತ್ಯಜಿಸುತ್ತಿದ್ದೇನೆ. ನನಗೂ ಈಗ 75 ವರ್ಷ ವಯಸ್ಸು. ಮುಂದಿನ ಚುನಾವಣೆಗೆ 78 ವರ್ಷ ಆಗಿರುತ್ತದೆ. ಹೀಗಾಗಿ ಚುನಾವಣಾ ರಾಜಕೀಯದಿಂದ ದೂರ ಉಳಿಯುವ ತೀರ್ಮಾನ ಎಂದರು. ಆದರೆ ರಾಜಕೀಯ ಮಾತ್ರ ಸಕ್ರಿಯವಾಗಿ ಇರಲಿದೆ ಎಂದು ಹೇಳಿದ್ದಾರೆ.

‘ಚುನಾವಣೆಗೆ ನಿಲ್ಲದೆ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಮುಂದುವರೆಯುವೆ ಎಂದು ಹೇಳಿದ್ದಾರೆ.

ಹುಣಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಜಣ್ಣ ಅವರು ಸಹಕಾರ ಕ್ಷೇತ್ರದ ಸ್ಥಿತಿಗತಿಗಳನ್ನು ವಿವರಿಸಿದರು. ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರವನ್ನು ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಹಕಾರ ಕ್ಷೇತ್ರದ ಕಾಯ್ದೆಯಲ್ಲಿ ತಿದ್ದುಪಡಿ ತರಲು ರಾಜ್ಯಪಾಲರ ಅಂಕಿತದ ನಂತರ ಕೇಂದ್ರಕ್ಕೆ ಕಳುಹಿಸುವ ಅಗತ್ಯವಿಲ್ಲ. ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾದ ಅಗತ್ಯವಿಲ್ಲ. ಈ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page