Thursday, June 19, 2025

ಸತ್ಯ | ನ್ಯಾಯ |ಧರ್ಮ

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಶಾಸಕ ಎ.ಎಸ್.ಪೊನ್ನಣ್ಣ ನೇಮಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್‌. ಪೊನ್ನಣ್ಣ ಅವರು ಅಧಿಕೃತವಾಗಿ ಇಂದು ನೇಮಕವಾಗಿದ್ದಾರೆ.

ಪೊನ್ನಣ್ಣ ಅವರನ್ನು ತಮ್ಮ ಕಾನೂನು ಸಲಹೆಗಾರನನ್ನಾಗಿ ನೇಮಿಸಿ ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಂಗಳ ಹಿಂದೆಯೇ ಸೂಚಿಸಿದ್ದರು.

ಅಷ್ಟೆ ಅಲ್ಲದೆ ಅವರಿಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡುವಂತೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ ಹಿನ್ನೆಲೆಯಲ್ಲಿ ಎಲ್ಲಾ ಸ್ಥಾನಮಾನ ಲಭಿಸಲಿದೆ.

ಬಿಜೆಪಿ ಪಕ್ಷದ ಭದ್ರಕೋಟೆಯಂತಿದ್ದ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ಮೂಲಕ ನಗೆ ಬೀರಿತ್ತು. ಆ ಹಿನ್ನೆಲೆಯಲ್ಲಿ ಜಿಲ್ಲೆಗೆ ಸಂಪುಟ ದರ್ಜೆಯ ಸ್ಥಾನಮಾನ ಬೇಕು ಎಂಬ ಒತ್ತಾಯವೂ ಇದ್ದ ಹಿನ್ನೆಲೆಯಲ್ಲಿ ಎ.ಎಸ್.ಪೊನ್ನಣ್ಣ ಅವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಸ್ಥಾನ ಲಭ್ಯವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page