Friday, June 20, 2025

ಸತ್ಯ | ನ್ಯಾಯ |ಧರ್ಮ

ಬಂಧನದ ಭೀತಿ : FIR ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡ ಶಾಸಕ ಮುನಿರತ್ನ

ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ, ಜಾತಿ ನಿಂದನೆ, ಅವಾಚ್ಯ ಶಬ್ದಗಳ ಬಳಕೆ ಮತ್ತು ಭ್ರಷ್ಟಾಚಾರದ ಅಡಿಯಲ್ಲಿ ಶಾಸಕ ಮುನಿರತ್ನ ವಿರುದ್ದ ದೂರು ನೀಡಿ, FIR ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾರೆ.

ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಕಸ ನಿರ್ವಹಣೆ ಹಾಗೂ ವಿಲೇವಾರಿ ಸಂಬಂಧ ಲಂಚ ನೀಡುವಂತೆ ಒತ್ತಾಯಿಸುವುದಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ದೂರು ದಾಖಲಿಸಿದ್ದಾರೆ.

ದೂರಿನ ನಂತರ ಶಾಸಕ ಮುನಿರತ್ನರನ್ನು ಸಂಪರ್ಕಿಸಲು ಪ್ರಯತ್ನಿಸಿದ ಪೊಲೀಸರು ಮತ್ತು ಪತ್ರಕರ್ತರು ಖಾಲಿ ಕೈಯಲ್ಲಿ ವಾಪಸ್ಸಾಗಿದ್ದಾರೆ. ಪೊಲೀಸರಿಗೂ ಸಿಗದ ಹಿನ್ನೆಲೆಯಲ್ಲಿ ಬಂಧನಕ್ಕೆ ಹೆದರಿ ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page