Home ರಾಜಕೀಯ ಟ್ರಂಪ್ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳುವ ಧೈರ್ಯ ಮೋದಿಗಿಲ್ಲ: ಖರ್ಗೆ

ಟ್ರಂಪ್ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳುವ ಧೈರ್ಯ ಮೋದಿಗಿಲ್ಲ: ಖರ್ಗೆ

0

ದೆಹಲಿ: ‘ಆಪರೇಷನ್ ಸಿಂಧೂರ್’ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳುತ್ತಿದ್ದಾರೆ. ಟ್ರಂಪ್ ಹೇಳಿಕೆ ಸುಳ್ಳು ಎಂದು ಹೇಳುವ ಧೈರ್ಯ ಕೇಂದ್ರ ಸರ್ಕಾರಕ್ಕಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಇಂದು ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಾನು ನಿನ್ನೆ ರಾಜ್ಯಸಭೆಯಲ್ಲಿ ಮಾಡಿದ ಭಾಷಣದ ಕೊನೆಯಲ್ಲಿ, ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಲಿದೆ ಎಂದು ಹೇಳಿದ್ದೆ.

ಪಹಲ್ಗಾಮ್ ದಾಳಿಯ ನಂತರ ಕೈಗೊಂಡ ‘ಆಪರೇಷನ್ ಸಿಂಧೂರ್’ ಸಮಯದಲ್ಲಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದರು ಎಂದು ಪದೇ ಪದೇ ಹೇಳುತ್ತಿದ್ದಾರೆ. ಆದರೆ ಅವರ ಮಾತುಗಳು ಸುಳ್ಳು ಎಂದು ಹೇಳುವ ಧೈರ್ಯ ಯಾರಿಗೂ ಇಲ್ಲ. ಇಂತಹ ಅರ್ಥಹೀನ ವಿಷಯಗಳನ್ನು ನಾವು ಸಹಿಸುವುದಿಲ್ಲ ಎಂದು ಹೇಳುವ ಧೈರ್ಯ ಬಿಜೆಪಿ ನಾಯಕರಿಗಿಲ್ಲ” ಎಂದು ಖರ್ಗೆ ಹೇಳಿದರು.

ಇದೇ ವೇಳೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. “ಮೋದಿ ಟ್ರಂಪ್‌ ಒಬ್ಬ ಸುಳ್ಳುಗಾರ ಎಂದು ಕರೆಯುವ ಧೈರ್ಯ ಮಾಡುವುದಿಲ್ಲ. ಮೋದಿ ಹಾಗೆ ಹೇಳಿದರೆ, ಎಲ್ಲಾ ಸತ್ಯಗಳು ಹೊರಬರುತ್ತವೆ” ಎಂದು ರಾಹುಲ್ ಹೇಳಿದರು.


You cannot copy content of this page

Exit mobile version