Friday, June 14, 2024

ಸತ್ಯ | ನ್ಯಾಯ |ಧರ್ಮ

ಇಸ್ರೋ ವಿಜ್ಞಾನಿಗಳನ್ನು ಅಭಿನಂದನೆ ಸಲ್ಲಿಸಲು ಬೆಂಗಳೂರು ತಲುಪಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಮುಗಿಸಿ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಚಂದ್ರಯಾನ-3 ಯಶಸ್ವಿ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಮೋದಿ ಇಲ್ಲಿಗೆ ಬರಲಿರುವುದು ಗೊತ್ತೇ ಇರುವ ವಿಷಯವಾಗಿದೆ.

ಈ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಬಂದ ಅವರು ಅಭಿಮಾನಿಗಳು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ‘ಜೈ ವಿಜ್ಞಾನ.. ಜೈ ಅನುಸಂಧಾನ್’ ಎಂಬ ಘೋಷಣೆಯನ್ನು ಮೊಳಗಿಸಿದರು. “ನಮ್ಮ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವಾಗ ನಾನು ಭಾರತದಲ್ಲಿ ಇರಲಿಲ್ಲ. ಆ ಅದ್ಭುತ ಕ್ಷಣಗಳನ್ನು ವಿದೇಶದಿಂದ ನೋಡಿದೆ. ಆಗಲೇ ನೇರವಾಗಿ ಬೆಂಗಳೂರಿಗೆ ಬರಬೇಕೆಂದುಕೊಂಡೆ. ನಾನು ಭಾರತಕ್ಕೆ ಬಂದ ಕೂಡಲೇ ವಿಜ್ಞಾನಿಗಳನ್ನು ಭೇಟಿಯಾಗಿ ಅಭಿನಂದಿಸಲು ಬಯಸಿದ್ದೆ. ನಾನು ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಲು ತುಂಬಾ ಉತ್ಸುಕನಾಗಿದ್ದೇನೆ” ಎಂದು ಮೋದಿ ಹೇಳಿದರು.

ಆ ಬಳಿಕ ಮೋದಿ ವಿಮಾನ ನಿಲ್ದಾಣದಿಂದ ನೇರವಾಗಿ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ತೆರಳಿದರು. ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಚಂದ್ರಯಾನ-3 ಉಡಾವಣೆಯ ಕಾರ್ಯವಿಧಾನವನ್ನು ಪ್ರಧಾನಿಗೆ ವಿವರಿಸಿದರು.

Related Articles

ಇತ್ತೀಚಿನ ಸುದ್ದಿಗಳು