ಅಚೀವರ್ಸ್ ಪ್ರಜ್ಞಾ ಕಾಲೇಜಿನ ಮೊಹಮ್ಮದ್ ಸಯೀದ್ ರಾಜ್ಯಮಟ್ಟಕ್ಕೆ ಆಯ್ಕೆ

ಹಾಸನ : ಕಾಲೇಜು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ. ಬಾಲಕರ ಅಥ್ಲೆಟಿಕ್ಸ್ ವಿಭಾಗದಲ್ಲಿ ಅಚೀವರ್ಸ್ ಪ್ರಜ್ಞಾ
ಪದವಿ ಪೂರ್ವ. ಕಾಲೇಜಿನ ವಿದ್ಯಾರ್ಥಿಯಾದ ಮೊಹಮ್ಮದ್ ಸಯೀದ್. 100ಮೀ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 200ಮೀ ಓಟದ ಸ್ಪರ್ಧೆಯಲ್ಲಿ ಆರಿಫ್ ತೃತಿಯಾ ಸ್ಥಾನ ಪಡೆದಿರುತ್ತಾರೆ. ಮತ್ತು 4*100ರಿಲೇ ಓಟದಲ್ಲಿ ನಿಖಿಲ್, ಮೊಹಮ್ಮದ್ ಸಯೀದ್, ಯುವರಾಜು ಹಾಗು ಆರಿಫ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಸಕಲೇಶಪುರ ತಾಲೂಕಿಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದು ಭಾಗವಹಿಸಿದ್ದಎಲ್ಲಾ ವಿದ್ಯಾರ್ಥಿಗಳಿಗೂ ಆಡಳಿತ ಮಂಡಳಿ ಅಭಿನಂದನಂದಿಸಿದೆ.

Related Articles

ಇತ್ತೀಚಿನ ಸುದ್ದಿಗಳು