ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅನಿಲ್ ದೇಶಮುಖ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದ್ದು, 1 ಲಕ್ಷದ ಶ್ಯೂರಿಟಿ ಮೊತ್ತದ ಮೇಲೆ ಜಾಮೀನು ನೀಡಲಾಗಿದೆ.
ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣದಲ್ಲಿ ಜಾಮೀನು ಪಡೆದ ನಂತರವೂ ಅನಿಲ್ ದೇಶಮುಖ್ ಅವರ ವಿರುದ್ಧ ದಾಖಲಾಗಿರುವ ಸಿಬಿಐ ಪ್ರಕರಣದಿಂದಾಗಿ ಅವರು ಬಂಧನದಲ್ಲಿಯೇ ಇರಬೇಕಾಗುತ್ತದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.