Sunday, June 22, 2025

ಸತ್ಯ | ನ್ಯಾಯ |ಧರ್ಮ

ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸಿ: ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್

ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ವೆಚ್ಚ ಮಾಡುವ ಹಣದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ವೆಚ್ಚ ವೀಕ್ಷಕರುಗಳಾದ ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್ ಅವರುಗಳು ಅಧಿಕಾರಿಗಳಿಗೆ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ 8 ವಿಧಾನಸಭಾ ಕ್ಷೇತ್ರಕ್ಕೆ ನೇಮಕವಾಗಿರುವ ವೆಚ್ಚ ವೀಕ್ಷಕ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿ ಮಾತನಾಡಿದರು.

ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ ಹಾಗೂ ಇನ್ನಿತರೆ ತಂಡಗಳು ಜವಾಬ್ದಾರಿಯುತವಾಗಿ ಕೆಲಸ ನಡೆಸಿ ಅಭ್ಯರ್ಥಿಯು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು ಎಂದರು.

ಅಭ್ಯರ್ಥಿಯು ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆದಿರುವುದು. ಹಾಗೂ ಲೆಕ್ಕಾಚಾರಕ್ಕೆ ಬಾರದೇ ಇರುವ ರೀತಿ ಯಾವುದಾದರೂ ಪ್ರಚಾರ ಕೆಲಸ ಹಣ ವೆಚ್ಚ ಮಾಡುತ್ತಿದ್ದರೆ ತಕ್ಷಣ ತಮ್ಮ ಗಮನಕ್ಕೆ ತರಬೇಕು. ಯಾವುದೇ ರೀತಿಯ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು.

ಹಣದ ಬಲದ ಮೇಲೆ ಚುನಾವಣೆ ನಡೆಯಬಾರದು. ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕು. ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ನೋಡಿಕೊಳ್ಳಿ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡಗಳು, ಅಧಿಕಾರಿಗಳು, ಸ್ಥಾಪನೆಯಾಗಿರುವ ಚೆಕ್ ಪೋಸ್ಟ್ ಗಳು ಹಾಗೂ ಇನ್ನಿತರೆ ಮಾಹಿತಿಗಳನ್ನು ವಿವರಿಸಿದರು.

ಸಭೆಯ ನಂತರ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾ ವೆಚ್ಚ ಮೇಲ್ವಿರಕರ ಕೋಶಕ್ಕೆ ಹಾಗೂ ವೆಚ್ಚ ವೀಕ್ಷಕರ ಕೊಠಡಿಗೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.

ಸಭೆಯಲ್ಲಿ‌ ಜಿಲ್ಲಾ ಪಂಚಾಯತ್ ಸಿ.ಎ.ಒ ಚಂದ್ರಶೇಖರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page