Sunday, June 8, 2025

ಸತ್ಯ | ನ್ಯಾಯ |ಧರ್ಮ

ಭಾರತಕ್ಕೆ ಮೇ 31 ಕ್ಕೇ ಮಾನ್ಸೂನ್ ಶುರು ; ವಾಡಿಕೆಗಿಂತ ಹೆಚ್ಚು ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಈ ಬಾರಿ ಮೇ 31 ಕ್ಕೇ ಭಾರತಕ್ಕೆ ಮಾನ್ಸೂನ್ ಆಗಮಿಸಲಿದ್ದು ದಕ್ಷಿಣದ ತುದಿ ಕೇರಳ ಪ್ರವೇಶಿಸುವ ಸಂಭವವಿದೆ ಎಂದು ತಿಳಿಸಿದೆ. ಈ ಸಮಯದಲ್ಲಿ ಸ್ವಲ್ಪ ಆಚೀಚೆ ಆದರೂ ನಾಲ್ಕೈದು ದಿನ ಹೆಚ್ಚು ಕಮ್ಮಿ ಆಗಬಹುದು ಎಂದು ನಿರೀಕ್ಷಿಸಲಾಗಿದೆ.

ಈ ಬಾರಿ ಮುಂಗಾರು ಮುಂಚಿತವಾಗೇನು ಪ್ರವೇಶ ಮಾಡುತ್ತಿಲ್ಲ. ಸಾಮಾನ್ಯವಾಗಿ ಜೂ.1ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸುವ ವಾಡಿಕೆ ಹೊಂದಿದ್ದು, ಅದೇ ಸಮಯವೇ ಈ ವರ್ಷವೂ ಪಾಲನೆಯಾಗಬಹುದು’ ಎಂದು ಹೇಳಿದೆ.

ನೈಋತ್ಯ ಮಾನ್ಸೂನ್ ಭಾರತಕ್ಕೆ ಪ್ರಮುಖ ಮಳೆಯನ್ನು ತರುವ ಕಾಲ. ಇದು ದೇಶದ ವಾರ್ಷಿಕ ಮಳೆಯ ಬಹುಪಾಲನ್ನು ಒದಗಿಸುತ್ತದೆ. ಈ ಅವಧಿಯಲ್ಲಿ ಖಾರೀಫ್ ಬೆಳೆಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ಜೂನ್ ಮತ್ತು ಜುಲೈ ತಿಂಗಳ ಅವಧಿಯ ನೈಋತ್ಯ ಮಾನ್ಸೂನ್ ಅತಿ ಮಹತ್ವದ್ದು ಅಂತಲೇ ಪರಿಗಣಿಸಲಾಗುತ್ತದೆ. ನೈಋತ್ಯದಿಂದ ಬೀಸುವ ಮಾನ್ಸೂನ್ ಸಾಮಾನ್ಯವಾಗಿ ಜೂನ್‌ನಲ್ಲಿ ಆರಂಭವಾಗಿ ಸೆಪ್ಟೆಂಬರ್ ತಿಂಗಳಿನಲ್ಲಿ ಕೊನೆಗೊಳ್ಳುತ್ತದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page