Saturday, April 19, 2025

ಸತ್ಯ | ನ್ಯಾಯ |ಧರ್ಮ

ಕೋವಿಡ್‌ ಕಾರಣದಿಂದ ಸತ್ತವರಿಗಿಂತಲೂ ಹೆಚ್ಚು ಜನರು ಬಿಜೆಪಿಯ ಭ್ರಷ್ಟಾಚಾರದಿಂದ ಸತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: “ಕೋವಿಡ್‌ ಕಾರಣದಿಂದ ಸತ್ತವರಿಗಿಂತಲೂ ಹೆಚ್ಚು ಜನರು ಬಿಜೆಪಿಯ ಭ್ರಷ್ಟಾಚಾರದಿಂದ ಸತ್ತಿದ್ದಾರೆ” ಎಂದು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಬೆಂಗಳೂರಿನಲ್ಲಿ ಆರೋಪಿಸಿದರು.

ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ನೇತೃತ್ವದ ಆಯೋಗವು ಸಲ್ಲಿಸಿದ ಸಾಂಕ್ರಾಮಿಕ ಸಮಯದಲ್ಲಿ ಪಿಪಿಇ ಕಿಟ್‌ಗಳ ಖರೀದಿಯಲ್ಲಿನ ಹಗರಣದ ಕುರಿತು ಸಲ್ಲಿಸಲಾದ ಮಧ್ಯಂತರ ವರದಿಯ ಆಯ್ದ ಭಾಗಗಳನ್ನು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, “ಬಿಜೆಪಿ ಶವಗಳ ಮೂಲಕವೂ ಹಣ ಸಂಪಾದಿಸಿದೆ ಎಂದು ವರದಿ ಹೇಳುತ್ತದೆ” ಎಂದು ಹೇಳಿದರು.

ವರದಿಯಲ್ಲಿ ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಶಿಫಾರಸು ಮಾಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page