Saturday, March 15, 2025

ಸತ್ಯ | ನ್ಯಾಯ |ಧರ್ಮ

ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ಲಕ್ಷ್ಮೀ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ೨೦೨೪ರ ಫೆ.೨೧ರಂದು ಇವರ ಪುತ್ರಿ ವಿಜಯಲಕ್ಷ್ಮಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಅವರ ಪ್ರಿಯಕರ ಕೈ ಕೊಟ್ಟ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಾಯಿ ಲಕ್ಷ್ಮಿ ಅವರು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಯುವಕನ ಮೇಲೆ ದೂರು ನೀಡಿದ್ದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿ ಡೆತ್‌ನೋಟ್‌ನಲ್ಲಿ ಯುವಕರ ಕುಟುಂಬದವರು ಮತ್ತು ಗ್ರಾಮದ ಕೆಲವು ಮುಖಂಡರ ಹೆಸರುಗಳನ್ನು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್‌ನೋಟ್‌ನಲ್ಲಿ ಏನಿದೆ
ನನ್ನ ಮಗಳು ಮೃತಪಟ್ಟು ೨೦ ದಿನ ಕಳೆದರೂ ಕಾನೂನು ಕ್ರಮ ತೆಗೆದುಕೊಳ್ಳದೆ ಇರುವುದರಿಂದ ಹಾಗೂ ಹರಿಕೃಷ್ಣ ಮನೆಯವರು ನಮ್ಮ ಮನೆಯವರ ಮೇಲೆ ದರ್ಪ ದೌರ್ಜನ್ಯ ತೋರಿಸಿ ಹಣದ ಆಮಿಷಕ್ಕೆ ಕಾನೂನು ಜಾರಿಯಾಗಿದ್ದು ಇವರ ನನ್ನ ಸಾವಿಗೆ ಕಾರಣರಾಗಿದ್ದಾರೆ.ಕೆಂಪೇಗೌಡ, ಸರೋಜಮ್ಮ, ನಾಗಣ್ಣ, ಚಿಕ್ಕತಿಮ್ಮೇಗೌಡ, ಪುಟ್ಟೇಗೌಡ, ಶಿವು, ಮಂಜು, ಪ್ರಕಾಶ ಇವರು ನಮ್ಮ ಊರಿನ ಜನಗಳು ನ್ಯಾಯ ಕೇಳುವುದಕ್ಕೆ ಹೋಗುವುದರಿಂದ ಜನರ ಮೇಲೆ ಕಂಪ್ಲೇಟ್ ಮಾಡಿ ಅವರದೇ ತಪ್ಪಿದ್ದರೂ ನಮ್ಮ ಊರಿನ ಜನರ ಮೇಲೆ ತಪ್ಪು ಹೊರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಸಾವಿಗೆ ಇವರೇ ಕಾರಣ ನನ್ನ ಮಗಳಿಗೆ ನ್ಯಾಯ ಕೊಡಿಸಿ ಎಂದು ಡೆತ್‌ನೋಟ್ ನಲ್ಲಿ ಬರೆದಿದ್ದಾರೆ.ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ವೃತ್ತ ನಿರೀಕ್ಷಕರ ಶಿವಪ್ರಸಾದ್ ರಾವ್ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page