Home ದೇಶ ಮುಲಾಯಂ ಸಿಂಗ್‌ ಯಾದವ್‌ ಅಂತ್ಯಕ್ರಿಯೆ ಇಂದು

ಮುಲಾಯಂ ಸಿಂಗ್‌ ಯಾದವ್‌ ಅಂತ್ಯಕ್ರಿಯೆ ಇಂದು

0

ಗುರುಗ್ರಾಮ: ಸಮಾಜವಾದಿ ಪಕ್ಷದ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಯಾದವ್‌ (82) ಅವರು  ಸೋಮವಾರ ಬೆಳಗ್ಗೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.

ಮುಲಾಯಂ ಸಿಂಗ್‌ ಯಾದವ್‌ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾದ ಕಾರಣ ಗುರುಗ್ರಾ ಮದ  ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅರೋಗ್ಯದಲ್ಲಿ ತೀವ್ರ ಸಮಸ್ಯೆ ಕಂಡು ಬಂದಿದ್ದು ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲೇ ನಿಧನರಾದರು.

ಈ ಹಿನ್ನಲೆಯಲ್ಲಿ ಮುಲಾಯಂ ಸಿಂಗ್‌ ಅವರ ಹುಟ್ಟೂರು ಉತ್ತರಪ್ರದೇಶದ ಇಟಾವಾ ಜಿಲ್ಲೆಯ ಸೈಫೈಯಲ್ಲಿ ಮಂಗಳವಾರ ಮದ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

ಮುಲಾಯಂ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದ್ದು, ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇರಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೇಳಿದ್ದಾರೆ.

You cannot copy content of this page

Exit mobile version