Saturday, June 15, 2024

ಸತ್ಯ | ನ್ಯಾಯ |ಧರ್ಮ

ಮುರುಘಾ ಮಠದ ಶಿವಮೂರ್ತಿಗಳ ಜಾಮೀನು ಅರ್ಜಿ ವಜಾ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಪರಿಶಿಷ್ಟ ಜಾತಿ ಮೇಲಿನ ದೌರ್ಜನ್ಯದ ಅಡಿಯಲ್ಲಿ ಪ್ರಕರಣ ದಾಖಲಾಗಿ ನಿನ್ನೆಯ ದಿನ ಬಂಧನಕ್ಕೆ ಒಳಗಾಗಿರುವ ಶಿವಮೂರ್ತಿ ಸ್ವಾಮಿಗಳ ಜಾಮೀನು ಅರ್ಜಿ ವಜಾಗೊಂಡಿದೆ.

ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಶಿವಮೂರ್ತಿಗಳ ಜಾಮೀನು ಅರ್ಜಿ ವಜಾಗೊಳಿಸಿದೆ. ಅದರಂತೆ ಶಿವಮೂರ್ತಿಗಳಿಗೆ 14 ದಿನ ನ್ಯಾಯಾಂಗ ಬಂಧನ ಮುಂದುವರೆಯಲಿದೆ. ಕಳೆದ ಆಗಸ್ಟ್ ತಿಂಗಳ 30 ರಂದು ಶಿವಮೂರ್ತಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 1 ಕ್ಕೆ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 2 ಕ್ಕೆ ಮುಂದೂಡಲಾಗಿತ್ತು. ಈಗ ಜಿಲ್ಲಾ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬಂಧನಕ್ಕೆ ಒಳಗಾಗಿರುವ ಶಿವಮೂರ್ತಿಗಳಿಗೆ ಬಂಧನದ ನಂತರದ ಕೆಲವೇ ಗಂಟೆಗಳಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಪ್ರಸ್ತುತ ಸ್ಥಳೀಯ ವೈದ್ಯಾಧಿಕಾರಿಗಳ ತಪಾಸಣೆಯಂತೆ ಸ್ವಾಮಿಗಳಿಗೆ ಹೃದಯ ಸಂಬಂಧಿ ಖಾಯಿಲೆ ಇರುವುದು ದೃಢಪಟ್ಟಿದೆ.

Related Articles

ಇತ್ತೀಚಿನ ಸುದ್ದಿಗಳು