ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಯವರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀ ಶಿವಮೂರ್ತಿಯವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಶಿವಮೂರ್ತಿಯವರನ್ನು ಬಂಧಿಸಿರುವ ವಿಷಯವನ್ನು ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಗಳಾದ ಪರಶುರಾಮ್ ಅವರು ಪೀಪಲ್ ಮೀಡಿಯಾಗೆ ಖಚಿತಪಡಿಸಿದ್ದಾರೆ.
ಮಠದಿಂದಲೇ ಪೊಲೀಸರು ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳಕ್ಕೆ ವಿಚಾರಣೆಗಾಗಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಶಕ್ಕೆ ಪಡೆದುಕೊಂಡು 24 ಗಂಟೆಯ ಒಳಗೆ ನ್ಯಾಯಾಧೀಶರ ಎದುರು ಹಾಜರು ಪಡಿಸಬೇಕಿರುತ್ತದೆ.
ಶಿವಮೂರ್ತಿಯವರ ಮೇಲೆ ಲೈಂಗಿಕ ಕಿರುಕುಳಕ್ಕೆ ಸಂಬಂದಿಸಿದಂತೆ ಪೋಕ್ಸೋ ಪ್ರಕರಣ ದಾಖಲಾಗಿರುವುದಲ್ಲದೇ ಎಸ್ ಸಿ ಎಸ್ ಟಿ ದೌರ್ಜನ್ಯ (ತಡೆ) ಕಾಯ್ದೆಯ ಅಡಿಯಲ್ಲಿಯೂ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು ವಿಚಾರಣೆ ನಡೆಯುತ್ತಿದೆ. ಈ ನಡುವೆ ಆರೋಪಿ ಶಿವಮೂರ್ತಿಯವರು ನಿರೀಕ್ಷಾಣಾ ಜಾಮೀನಿಗೆ ಅರ್ಜಿ ಅಲ್ಲಿ ಸಲ್ಲಿದ್ದರು. ಚಿತ್ರದುರ್ಗ ಜಿಲ್ಲಾ ೨ ನೇ ಸೆಶನ್ಸ್ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ನಾಳೆಗೆ (ಸೆ. ೨) ಮುಂದೂಡಿತ್ತು. ಅಷ್ಟರಲ್ಲಿ ಪೊಲೀಸರು ಮಠದಿಂದಲೇ ವಶಕ್ಕೆ ತೆಗೆದುಕೊಂಡಿದ್ದಾರೆ.