Tuesday, April 30, 2024

ಸತ್ಯ | ನ್ಯಾಯ |ಧರ್ಮ

ಮುರುಘಾ ಶರಣರನ್ನು ಮರಳಿ ಚಿತ್ರದುರ್ಗಕ್ಕೆ ಕರೆತರುತ್ತಿರುವ ಪೊಲೀಸರು

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಕಾರನ್ನು ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ತಡೆದಿರುವ ಪೊಲೀಸರು ಚಿತ್ರಾದುರ್ಗಕ್ಕೆ ಮರಳಿ ಕರೆತರುವ ಪ್ರಯತ್ನದಲ್ಲಿದ್ದಾರೆ.

ತಮ್ಮ ಮೇಲೆ ಪೋಕ್ಸೋ ಕಾಯ್ದೆಯಡಿ ಎಫ್‌ ಐ ಆರ್‌ ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಬಂಧನದಿಂದ ತಪ್ಪಿಸಿಕೊಳ್ಳಲು ಶಿವಮೂರ್ತಿ ಮುರುಘಾ ಶರಣರು ಮಠದಿಂದ ಹೊರನಡೆದು ಅಜ್ಞಾತ ಸ್ಥಳಕ್ಕೆ ತೆರಳುತ್ತಿದ್ದರೆನ್ನಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಸ್ವಾಮೀಜಿಗಾಗಿ ಹುಡುಕಾಟ ಪ್ರಾರಂಭಿಸಿದ ಚಿತ್ರದುರ್ಗ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರು ಹೋಗುತ್ತಿದ್ದ ಕಾರನ್ನು ತಡೆ ಹಿಡಿದು ಸ್ವಾಮೀಜಿಯವರ ಮನವೊಲಿಸಿ ಮರಳಿ ಚಿತ್ರದುರ್ಗಕ್ಕೆ ಕರೆತರುತ್ತಿದ್ದಾರೆ.

ʼಶರಣರನ್ನು ಬಂಧಿಸಲಾಗಿದೆʼ ಎಂಬ ಗಾಳಿ ಸುದ್ದಿ ಹರಡುತ್ತಿರುವ ಹಿನ್ನೆಲೆಯಲ್ಲಿ ಖಚಿತಪಡಿಸಿಕೊಳ್ಳಲು ಚಿತ್ರದುರ್ಗದ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಲಾಗಿ, “ಬಂಧನದ ಸುದ್ದಿ ಸುಳ್ಳು. ಮುರುಘಾ ಶರಣರನ್ನು ಬಂಧಿಸಲಾಗಿಲ್ಲ” ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಪೀಪಲ್‌ ಮೀಡಿಯಾಕ್ಕೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ

https://peepalmedia.com/2022/08/muruga-sharanaru-analysis/

Related Articles

ಇತ್ತೀಚಿನ ಸುದ್ದಿಗಳು