Monday, June 17, 2024

ಸತ್ಯ | ನ್ಯಾಯ |ಧರ್ಮ

ಮತ್ತೆ ಮುರುಘಾ ಮಠದ ಶಿವಮೂರ್ತಿ ಬಂಧನ

ಬೆಂಗಳೂರು: ಎರಡನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಮತ್ತೆ ಬಂಧನವಾಗಿದೆ. ದಾವಣಗೆರೆ ವಿರಕ್ತ ಮಠದಲ್ಲಿದಲ್ಲಿದ್ದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಇಂದು ಚಿತ್ರದುರ್ಗ ಗ್ರಾಮಾಂತರ ಠಾ಼ಣೆಯ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ಹಗರಣದಲ್ಲಿ ಬಂಧನಕ್ಕೊಳಗಾಗಿ ನಾಲ್ಕು ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಸಿಪಿಐ ಮುದ್ದುರಾಜ್‌ ನೇತೃತ್ವದ ತಂಡ ಮತ್ತೆ ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ. ಇಂದೇ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಯಿದೆ.

ನವೆಂಬರ್‌ 16ರಂದು ಪೋಕ್ಸೊ ಮೊದಲನೇ ಪ್ರಕರಣದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನು ಪಡೆದು ಬಿಡುಗಡೆಯಾಗಿದ್ದ ಇವರನ್ನು ಇನ್ನೊಂದು ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆಯೋ ಮುನ್ನವೇ ಬಿಡುಗಡೆಗೊಂಡ ಕಾರಣ 4 ದಿನಗಳಲ್ಲೇ ಮತ್ತೆ ಬಂಧಿಸಲಾಗಿದೆ.

ಬಿಡುಗಡೆಯಾದ ಮೇಲೆ ಎರಡನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿನೆ ನೀಡಿದ್ದರೂ, ಆದೇಶವನ್ನು ಪಾಲಿಸದೇ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದರು. ಇದನ್ನು ಸರ್ಕಾರಿ ವಕೀಲರು ಪ್ರಶ್ನೆ ಮಾಡಿ, ಆದೇಶ ಉಲ್ಲಂಘನೆ ಮಾಡಿದ ಇವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದರು.

ಮೊದಲ ಪ್ರಕರಣದಲ್ಲಿ ಹೈಕೋರ್ಟ್ ಏಳು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿ, ಬಿಡುಗಡೆ ಮಾಡಿತ್ತು. ವಿಚಾರಣೆಗೆ ಹಾಜರಾಗುವುದು. ಸಾಕ್ಷ್ಯ ನಾಶ ಮಾಡದಿರುವುದು. ಜಾಮೀನು ಪಡೆಯುವ ಮೊದಲು ಇಬ್ಬರ ಶ್ಯೂರಿಟಿ. ವಿದೇಶಕ್ಕೆ ಹೋಗದಂತೆ ಪಾಸ್ ಪೋರ್ಟ್ ಸರೆಂಡರ್‌ ಮಾಡುವುದು. 2 ಲಕ್ಷ ರೂಪಾಯಿಯ ಜಾಮೀನು ಬಾಂಡ್ ನೀಡುವುದು – ಈ ಷರತ್ತುಗಳನ್ನು ವಿಧಿಸಲಾಗಿತ್ತು.

Related Articles

ಇತ್ತೀಚಿನ ಸುದ್ದಿಗಳು