Home ರಾಜಕೀಯ ನನ್ನ ಹೋರಾಟ ಜೀವನ ರಕ್ತಗತವಾಗಿ ಬಂದ ಬಳುವಳಿ, ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ನಿಖಿಲ್ ಕುಮಾರಸ್ವಾಮಿ

ನನ್ನ ಹೋರಾಟ ಜೀವನ ರಕ್ತಗತವಾಗಿ ಬಂದ ಬಳುವಳಿ, ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ನಿಖಿಲ್ ಕುಮಾರಸ್ವಾಮಿ

0

ಹಾಸನ : ಅರಕಲಗೂಡು ತಾಲ್ಲೂಕಿನ ರಾಮನಾಥಪುರದಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ ಮಾಜಿಸಚಿವ ಎ.ಮಂಜು ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಹಾಲಿ‌ ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನನ್ನ ಹೋರಾಟ ಜೀವನ ರಕ್ತಗತವಾಗಿ ಬಂದ ಬಳುವಳಿ, ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಹಾಸನ ಜಿಲ್ಲೆಯ ಜನತೆ ಒಬ್ಬ ಸಾಧಾರಣ ರೈತ ಕುಟುಂಬದ ಮಗನಾಗಿ ಜನಿಸಿರುವ ದೇವೇಗೌಡರಿಗೆ ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿಯನ್ನು ತುಂಬಿ ಇಲ್ಲಿನ ಜನರು ಇತಿಹಾಸ ಸೃಷ್ಟಿ ಮಾಡಿದ್ದು ಇನ್ನು ನನ್ನ ಕಣ್ಣ ಮುಂದಿದೆ. ರಾಮನಗರ ಜಿಲ್ಲೆ ಕೂಡ ನಮ್ಮ ಕುಟುಂಬಕ್ಕೆ ಎಂಟು ಬಾರಿ ಶಾಸಕ ಸ್ಥಾನ ಕೊಟ್ಟಿರುವ ಜಿಲ್ಲೆ. ಮೂರು ಬಾರಿ ಸಂಸದರಾಗಿ ಕುಮಾರಣ್ಣ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಏಳು-ಬೀಳು ಸರ್ವೇ ಸಾಮಾನ್ಯ. ನಾನು ಸಂಸದನಾಗಲು, ಶಾಸಕನಾಗಲು ಎಂದೂ ಹಪಾಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ, ರಾಜಕಾರಣಕ್ಕೆ ಬರುತ್ತಿದ್ದೆ. ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ದವಾಗಿತ್ತು, ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು. ಆದರೆ ನಮ್ಮ ಪಕ್ಷ ಸಂಕಷ್ಟದಲ್ಲಿತ್ತು, ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿರುತ್ತೇನೆ ಎಂದು ಹೇಳಿದರು.

ನಾನು ರಾಜಕಾರಣದ ಕೌಟುಂಬಿಕ ಹಿನ್ನೆಲೆಯಲ್ಲಿ ಬಂದಿರುವ ವ್ಯಕ್ತಿಯಾಗಿದ್ದರೂ ಚಿತ್ರರಂಗದಲ್ಲಿ ನನ್ನದೇ ಆದಷ್ಟು ಸವಾಲುಗಳನ್ನು ಸ್ವೀಕಾರ ಮಾಡಿದೆ. ಜಾಗ್ವಾರ್ ಮೂಲಕ ನಮ್ಮ ತಂದೆ ಪರಿಚಯಿಸಿದರು. ಆ ರೀತಿ ಅನೇಕ ಚಿತ್ರಗಳನ್ನು ಮಾಡಿದೆ. ತದನಂತರ ಸಾರ್ವಜನಿಕ ಬದುಕಿನಲ್ಲಿ ಜವಾಬ್ದಾರಿಗಳನ್ನು ಅರಿತಿದ್ದೇನೆ. ಆ ಒಂದು ಕಾರಣದಿಂದ ಸಂಪೂರ್ಣವಾಗಿ ಸಾರ್ವಜನಿಕ ಬದುಕಿಗೆ ಧುಮುಕಿದ್ದೇನೆ ಎಂದು ಹೇಳಿದರು.

ನಮ್ಮ ನಾಡಿನ ನೆಲ, ಜಲ, ಭಾಷೆಯ ವಿಚಾರವಾಗಿ ದೇವೇಗೌಡರು 92 ವರ್ಷ ವಯಸ್ಸಾದರೂ ರಾಜ್ಯಸಭೆಯಲ್ಲಿ ಏಕಾಂಗಿಯಾಗಿ ನೆಲ, ಜಲ, ಭಾಷೆ ಉಳಿಸುವ ಕೆಲಸ ಮಾಡುತ್ತಿದ್ದಾರೆ. , ನನ್ನ ಜೀವನದ ಸ್ಫೂರ್ತಿ ದೇವೇಗೌಡರು. ನಾನು ನನ್ನ ಜವಾಬ್ದಾರಿಯನ್ನ ಅರಿತಿದ್ದೇನೆ. ಅನಿರೀಕ್ಷಿತವಾದ ಬೆಳವಣಿಗೆಯೊಂದರಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ. ಕರ್ನಾಟಕ ರಾಜ್ಯದಲ್ಲಿ ಕಟ್ಟಿರುವ ರೈತ ಪರವಾದ ಪಕ್ಷ, ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಲಕ್ಷಾಂತರ ಕಾರ್ಯಕರ್ತರು ನಿಮ್ಮ ದುಡಿಮೆ, ಎಲ್ಲಾ ತಂದೆ, ತಾಯಿಯರು ಆಶೀರ್ವಾದ, ರೈತರು ಆಶೀರ್ವಾದ ಮಾಡಿ ಇಲ್ಲಿಯವರೆಗೆ ಬೆಳೆಸಿ, ಉಳಿಸಿದ್ದೀರಿ ಎಂದರು. , 19 ಸ್ಥಾನ ಗೆದ್ದು 18 ಕ್ಕೆ ಇಳಿದಿದ್ದೇವೆ ಎಂದು ಹೇಳಿದರು.

ನಿಮ್ಮಲ್ಲೆರ ಆಶೀರ್ವಾದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ. ನಾನು ಸೋತು ಒಂದು ವಾರ ಆಗಿದೆ. ನೀವು ಎಂದೆಗುಂದಬಾರದು ಎಂದು ಅನೇಕರು ಹೇಳಿದರು. ನನಗಿನ್ನೂ ವಯಸ್ಸು 36 ವರ್ಷ ಅಷ್ಟೇ. ಜೆಡಿಎಸ್‌ ಪಕ್ಷವನ್ನು ದಡ ಮುಟ್ಟಿಸಬೇಕು ಎನ್ನುವುದೊಂದೇ ನನ್ನ ಮುಂದೆ ಇರುವುದು ಏಕೈಕ ಸವಾಲು ಎಂದರು.

ನಾನು ಶಾಸಕನಾಗಬೇಕು ಎನ್ನುವುದು ನನ್ನ ಮುಂದೆ ಇರುವ ಪ್ರಶ್ನೆ ಅಲ್ಲ. ಪ್ರಾದೇಶಿಕ ಪಕ್ಷ ಉಳಿಯಬೇಕಿದೆ, ಕನ್ನಡಿಗರ ಅಸ್ಮಿತೆಗಾಗಿ ಈ ಪಕ್ಷ ಉಳಿಯಬೇಕಿದೆ. ಆ ಹಿನ್ನೆಲೆಯಲ್ಲಿ ಹೋರಾಟ ಮಾಡುತ್ತೇನೆ. ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ ಎಂದರು.

You cannot copy content of this page

Exit mobile version