Saturday, June 21, 2025

ಸತ್ಯ | ನ್ಯಾಯ |ಧರ್ಮ

ನಗರದ ರಸ್ತೆ ಗುಂಡಿಗಳ ಮುಚ್ಚುವಲ್ಲಿ ಸರ್ಕಾರದ ನಿರ್ಲಕ್ಷ್ಯ : ಅ.21ರಂದು ಪ್ರತಿಭಟನೆ

ಬೆಂಗಳೂರು : ಸರ್ಕಾರದ ನಿರ್ಲಕ್ಷತನದ ಪರಿಣಾಮ ರಸ್ತೆ ಗುಂಡಿಗಳಿಂದ ವಾಹನಸವಾರರು ಸಾವಿಗಿಡಾಗುತ್ತಿರುವುದು ವಿಷಾದಕರ, ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಬಿಜೆಪಿ ಸರ್ಕಾರದ ವಿರುದ್ಧ ಸನ್ಮಾನ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾ ರೆಡ್ಡಿಯವರು ಸೇರಿದಂತೆ ಹಲವು ಸಂಸದರು  21-10-2022ರ ಶುಕ್ರವಾರ ಬೆಳಿಗ್ಗೆ 11.30 ಗಂಟೆಗೆ  ಪ್ರತಿಭಟನೆ ನಡೆಸಲಿದ್ದಾರೆ.

ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹೈಕೋರ್ಟ್ ಸರ್ಕಾರದ ಮುಖ್ಯ ಆಯುಕ್ತರನ್ನು ಕರೆಸಿ ಎಚ್ಚರಿಕೆ ನೀಡಿದರು ಸಹ ಸರ್ಕಾರದ ನಿರ್ಲಕ್ಷತನದ ಪರಿಣಾಮ ರಸ್ತೆ ಗುಂಡಿಗಳಿಂದ ವಾಹನಸವಾರರು ಸಾವಿಗಿಡಾಗುತ್ತಿರುವುದು ವಿಷಾದಕರ, ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಬಿಜೆಪಿ ಸರ್ಕಾರದ ವಿರುದ್ಧ ನಾಳೆ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮಹಾತ್ಮಗಾಂಧಿ ಪ್ರತಿಮೆ ಯಿಂದ ಮುಖ್ಯಮಂತ್ರಿ ನಿವಾಸದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಯನ್ನು ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದೆ.

ಈ ಪ್ರತಿಭಟನೆಯಲ್ಲಿ ಸನ್ಮಾನ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾ ರೆಡ್ಡಿ ರವರು, ನಗರದ ಸಂಸದರು, ಶಾಸಕರು, ಪಕ್ಷದ ಹಿರಿಯ ಮುಖಂಡರುಗಳು, ಮಾಜಿ ಮಹಾಪೌರರುಗಳು, ಮಾಜಿ ಬಿಬಿಎಂಪಿ ಸದಸ್ಯರುಗಳು, ಭಾಗವಹಿಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page