ಬೆಂಗಳೂರು : ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ರಾಜ್ಯ ಸರ್ಕಾರ ವಿರುದ್ದ ಸಚಿವ ರಾಮಲಿಂಗಾ ರೆಡ್ಡಿಯವರು ನಗರದ ಅಭಿವೃದ್ದಿ ಇಲಾಖೆ ಜವಬ್ದಾರಿಯನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದು ಈ ರೀತಿಯ ವ್ಯವಸ್ಥೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಬೆಂಗಳೂರು ರಸ್ತೆಗುಂಡಿ ಸಮಸ್ಯೆಗೆ ಸಂಬಂಧ ಪಟ್ಟಂತೆ, ʼನಗರದ ಅಭಿವೃದ್ಧಿ ಇಲಾಖೆ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದು, ಸಿಎಂ ಸೇರಿ ಬೆಂಗಳೂರಿಗೆ ಅಷ್ಟ ದಿಕ್ಪಾಲಕರಂತೆ 8 ಜನ ಮಂತ್ರಿಗಳು ಸರ್ಕಾರದಲ್ಲಿ ಇದ್ದಾರೆ ಆದರೆ ನಗರದ ರಸ್ತೆ ಗುಂಡಿಗಳ ಅಭಿವೃದ್ದಿ ಈ ರೀತಿ ಕಳಪೆಯಾಗಿವೆʼ ಎಂದು ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ.
ಇನ್ನ ಬಿಡಿಎ ಮುಖ್ಯಸ್ಥರೂ, ಮುಖ್ಯ ಸಚೇತಕರು ಬೆಂಗಳೂರಿನ ಶಾಸಕರೇ ಆಗಿದ್ದಾರೆ ಆದರೆ ಯಾವ ಪ್ರಯೋಜನವಿಲ್ಲ ಎಂಬ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ.