Thursday, June 27, 2024

ಸತ್ಯ | ನ್ಯಾಯ |ಧರ್ಮ

ನಾಳೆಯಿಂದ ಒಂದು ವಾರ ಬೈಕ್‌ ಹಿಂಬದಿ ಸವಾರರಿಗೆ ನಿರ್ಬಂಧ:  ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಮೊಹಮದ್ ಫಾಝಿಲ್ ಹತ್ಯೆ ಬಳಿಕ ಹೇರಲಾಗಿದ್ದ ಸೆಕ್ಷನ್ 144 ನಿಷೇಧಾಜ್ಞೆಯನ್ನು ಸಡಿಲಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದು, ಬೈಕ್‌ ಸವಾರರಿಗೆ ಹೊಸ ನಿರ್ಬಂಧ ಹೇರಲಾಗಿದೆ ಎಂದರು.

ಮಂಗಳೂರು ನಗರದಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಗೆ ಸಂಬಂಧಿಸಿದಂತೆ ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೈಕ್‌ ಹಿಂಬದಿ ಸವಾರರ ನಿರ್ಬಂಧದ ಕುರಿತು ಸೂಚನೆ ನೀಡಿರುವ ಎಡಿಜಿಪಿ ಅಲೋಕ್ ಕುಮಾರ್,  ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ ಅಹಿತಕರ ಘಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರ ಆಯುಕ್ತರು ಜುಲೈ 28 ರಿಂದ ಆಗಸ್ಟ್ 5 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು.ಈ ಮಧ್ಯೆ ಮಂಗಳೂರು ನಗರ ಸಹಜ ಸ್ಥಿತಿಗೆ ಬರುತ್ತಿರುವ ಕಾರಣ ಆಗಸ್ಟ್ 5ರ ಬಳಿಕ ಹಂತ ಹಂತವಾಗಿ ನಿಷೇಧಾಜ್ಞೆಯನ್ನು ಸಡಿಲಗೊಳಿಸುವಂತೆ ಹೇಳಿದ್ದು, ನಿಷೇಧಾಜ್ಞೆಯನ್ನು ಸಡಿಲಿಸಿದ ಬಳಿಕ ಒಂದು ವಾರದ ಕಾಲ ಬೈಕ್’ನಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ ಹೇರಲಾಗಿದೆ. ಆದರೆ 18 ವರ್ಷದ ಒಳಗಿನವರು, ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಈ ರೂಲ್ಸ್ ನಿಂದ ವಿನಾಯತಿ ನೀಡಲಾಗಿದೆ.

ಎಂದು ತಿಳಿಸಿದರು. ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು