Thursday, June 19, 2025

ಸತ್ಯ | ನ್ಯಾಯ |ಧರ್ಮ

ನಾಲ್ಕನೇ ವಂದೇ ಭಾರತ್‌ ಎಕ್ಸ್ ಪ್ರೆಸ್‌ ರೈಲಿಗೆ ಚಾಲನೆ

ಹಿಮಾಚಲ ಪ್ರದೇಶ : ಇಂದು ಪ್ರಧಾನಿ ನರೇಂದ್ರ ಮೋದಿಯವರು ಅನೇಕ ಯೋಜನೆಗಳೊಂದಿಗೆ ಹಿಮಾಚಲ ಪ್ರದೇಶಕ್ಕೆ ತೆರಳಿದ್ದು, ಉನಾದಿಂದ ವಂದೇ ಭಾರತ್‌ ಎಕ್ಸ್ ಪ್ರೆಸ್‌ ರೈಲಿಗೆ ಚಾಲನೆ ನೀಡಿದ್ದು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ.

ಗುರುವಾರದಂದು ಪ್ರಧಾನಿ ನರೇಂದ್ರ ಮೋದಿಯವರು ಹಲವು ಯೋಜನೆಗಳೊಂದಿಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದಾರೆ. ಉನಾದಿಂದ ವಂದೇ ಭಾರತ್‌ ಎಕ್ಸ್ ಪ್ರೆಸ್‌ ರೈಲಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರವರ ಉಪಸ್ಥಿತಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ದೇಶದಲ್ಲಿ ನಾಲ್ಕನೇ ವಂದೇ ಭಾರತ್ ಎಕ್ಸ್ ಪ್ರೆಸ್‌ ರೈಲು ಇದಾಗಿದೆ. ಇತರ 3 ರೈಲುಗಳು ನವದೆಹಲಿಯಿಂದ ವಾರಣಾಸಿ , ನವದೆಹಲಿ – ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ಮತ್ತು ಗಾಂಧಿನಗರ – ಮುಂಬೈನ ಮಧ್ಯೆ ಚಾಲನೆ ನೀಡಲಾಗಿದೆ.

ತದನಂತರ ನರೇಂದ್ರ ಮೋದಿಯವರು ಅಲ್ಲಿನ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ, IIIT ಉನಾವನ್ನು ರಾಷ್ಟ್ರಕ್ಕೆ ಅರ್ಪಿಸಿ ಉನಾದಲ್ಲಿ ಬಲ್ಕ್‌ ಡ್ರಗ್‌ ಪಾರ್ಕ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ ಚಂಪಾದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಎರಡು ಜಲವಿದ್ಯುತ್‌ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇಷ್ಟಲ್ಲದೆ, ಹಿಮಾಚಲ ಪ್ರದೇಶದಲ್ಲಿ ಗ್ರಾಮ ಸಡಕ್‌ ಯೋಜನೆಯನ್ನು(PMGSY) – III ಅನ್ನು ಪ್ರಾರಂಭ ಮಾಡುತ್ತಿದ್ದಾರೆ.

 



Related Articles

ಇತ್ತೀಚಿನ ಸುದ್ದಿಗಳು

You cannot copy content of this page