ಮುಂಬೈ: ಮಹಾರಾಷ್ಟ್ರ ಪಿಸಿಸಿ ಮುಖ್ಯಸ್ಥ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಘೋಷಿಸಿದರು.
ಅವರು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ನಾಯಕತ್ವಕ್ಕೆ ಕಳುಹಿಸಿದ್ದಾರೆ. ಆದರೆ ಈ ರಾಜೀನಾಮೆಯನ್ನು ಕಾಂಗ್ರೆಸ್ ನಾಯಕತ್ವ ಇನ್ನೂ ಅಂಗೀಕರಿಸಿಲ್ಲ.
ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಪರಾಭವಗೊಂಡಿತ್ತು. ಸ್ಪರ್ಧಿಸಿದ್ದ 103 ಸ್ಥಾನಗಳ ಪೈಕಿ 16 ಸ್ಥಾನಗಳಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿದೆ. ಸಾಕೋಲಿ ಕ್ಷೇತ್ರದಲ್ಲಿ ನಾನಾಪಟೋಳೆ ಕೇವಲ 208 ಮತಗಳ ಅಂತರದಿಂದ ಸೋತಿದ್ದಾರೆ.
2021ರಲ್ಲಿ ಮಾಜಿ ಸಂಸದ ನಾನಾಪಟೋಲೆ ಅವರು ಕಾಂಗ್ರೆಸ್ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದರು. ನಾನಾ ಪಟೋಲ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅದ್ಭುತ ಪ್ರದರ್ಶನ ನೀಡಿತ್ತು. 17 ಸ್ಥಾನಗಳ ಪೈಕಿ 13ರಲ್ಲಿ ಗೆಲುವು ಸಾಧಿಸಿತ್ತು.
ವಿಧಾನಸಭಾ ಚುನಾವಣೆಗೂ ಮುನ್ನ ಸೀಟು ಒಪ್ಪಂದದ ಮಾತುಕತೆಯಲ್ಲಿ ಹೆಚ್ಚಿನ ಸ್ಥಾನಗಳಿಗೆ ಕಾಂಗ್ರೆಸ್ ಒತ್ತಾಯಿಸಿತ್ತು. ಇದು ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್ಸಿಪಿ (ಶರದ್ ಪವಾರ್) ನಡುವೆ ಘರ್ಷಣೆಗೆ ಕಾರಣವಾಯಿತು. ನಾನಾಪಟೋಲೆ ನೇತೃತ್ವದ ಸ್ಥಾನಗಳ ಮಾತುಕತೆಗೆ ಉದ್ಧವ್ ಠಾಕ್ರೆ ನಿರಾಕರಿಸಿದ್ದರು ಎನ್ನುವ ವರದಿಗಳಿವೆ.