Home ದೇಶ ಮಣಿಪುರ ಹಿಂಸಾಚಾರ: ನಾಳೆ ಆಮ್‌ ಆದ್ಮಿ ಪಕ್ಷದಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

ಮಣಿಪುರ ಹಿಂಸಾಚಾರ: ನಾಳೆ ಆಮ್‌ ಆದ್ಮಿ ಪಕ್ಷದಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

0

ಮಣಿಪುರ ಹಿಂಸಾಚಾರ ಮತ್ತು ಅನಿಶ್ಚಿತ ಪರಿಸ್ಥಿತಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ಸೋಮವಾರ ತಿಳಿಸಿದ್ದಾರೆ. ನವದೆಹಲಿ: ಮಣಿಪುರ ಹಿಂಸಾಚಾರ ಮತ್ತು ಅನಿಶ್ಚಿತ ಪರಿಸ್ಥಿತಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ಸೋಮವಾರ ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರ ಖಂಡಿಸಿ ದೆಹಲಿಯಲ್ಲಿ, ಜಂತರ್ ಮಂತರ್ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಉನ್ನತ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಣಿಪುರ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಹಲವು ವಿರೋಧ ಪಕ್ಷಗಳ ನಾಯಕರು ಸೋಮವಾರ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದರು. ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 160ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಮೇ 4 ರಂದು ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋವೊಂದು ಕಳೆದ ವಾರ ಆನ್ಲೈನ್ನಲ್ಲಿ ಕಾಣಿಸಿಕೊಂಡ ನಂತರ ಮಣಿಪುರದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

You cannot copy content of this page

Exit mobile version