ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ಜನ್ಮದಿನೋತ್ವದ ಪ್ರಯುಕ್ತ ಆಯೋಜಿಸಲಾಗಿದ್ದ ಸಿದ್ದರಾಮೋತ್ಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನಗರದ ಎಸ್ ಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಿದ್ದರಾಮೋತ್ಸವದಲ್ಲಿ ಸಿದ್ದರಾಮಯ್ಯನವರ ಆಡಳಿತದ ಬಗ್ಗೆ ಮಾತನಾಡಿದ ಅವರು ಸಿದ್ದರಾಮಯ್ಯ ಕೇವಲ ಹಿಂದುಗಳ ನಾಯಕನಲ್ಲ. ಅವರು ಸರ್ವಧರ್ಮ, ಸರ್ವಜನಾಂಗದ ನಾಯಕ . ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ನಾವೆಲ್ಲ ಶಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದೆವು. ಅವರು ಒಬ್ಬ ಉತ್ತಮ ರಾಜಕಾರಣಿ. ಹಾಗಾಗಿ ನಾವೆಲ್ಲ ಮತ್ತೆ ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಕೆಲಸ ಮಾಡೋಣ. ಕಾಂಗ್ರೆಸ್ ಪಕ್ಷವನ್ನ ಮತ್ತೊಮ್ಮೆ ಅಧಿಕಾರಕ್ಕೆ ತರೋಣ ಎಂದರು.
ಸರ್ಕಾರದ ಆಡಳಿದ ಬಗ್ಗೆ ಕಿಡಿಕಾರಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಡೆಸುವಂತ ಅಧಿಕಾರ ಉತ್ತಮವಾಗಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ಕೋಮುವಾದ ತಾಂಡವವಾಡುತ್ತಿದೆ ಹಾಗಾಗಿ ಎಲ್ಲರು ಇಂದೇ ಸಂಕಲ್ಪಮಾಡಿ, ನಾವೇಲ್ಲ ಒಗ್ಗಟ್ಟಾಗಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯೋಣ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದರಿಸೋಣ ಎಂದರು.