ತಮಿಳುನಾಡು: ತಿರುವಳ್ಳೂರು ಜಿಲ್ಲೆಯಲ್ಲಿ 19 ವರ್ಷದ ಯುವತಿ ಲಕ್ಷಣ ಶ್ವೇತ ನೀಟ್-ಯುಜಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ವಿಫಲರಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ರಾತ್ರಿ ನೀಟ್-ಯುಜಿ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲಾಗಿದ್ದು, ಪರೀಕ್ಷೆಗಳಲ್ಲಿ ಉತ್ತೀರ್ಣರಾಗದಿರುವ ಕಾರಣ ಆಕೆ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಕಳೆದ ವರ್ಷ 2021 ರ ನೀಟ್ ಪರೀಕ್ಷೆಯಲ್ಲಿ 17 ವರ್ಷದ ಬಾಲಕಿ ಅನಿತ ತೇರ್ಗಡೆಯಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಈ ಹಿನ್ನಲೆಯಲ್ಲಿ ತಮಿಳುನಾಡನ್ನು ನೀಟ್ ಪರೀಕ್ಷೆಯಿಂದ ಹೊರಗಿಡಬೇಕೆಂದು ಬೇಡಿಕೆ ಇಟ್ಟು ನಡೆಯುತ್ತಿದ್ದ ಹೋರಾಟಗಳಿಗೆ ಈ ಸಾವು ಇನ್ನಷ್ಟು ತೀವ್ರತೆಯನ್ನು ತಂದಿತ್ತು.